ADVERTISEMENT

ಹದಗೆಟ್ಟ ರಸ್ತೆ ದುರಸ್ತಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2018, 6:07 IST
Last Updated 20 ಫೆಬ್ರುವರಿ 2018, 6:07 IST

ಕೆ.ಆರ್.ಪೇಟೆ: ತಾಲ್ಲೂಕು ಕೇಂದ್ರದಿಂದ 4 ಕಿ.ಮೀ ದೂರದಲ್ಲಿರುವ ಐತಿಹಾಸಿಕ ಗ್ರಾಮ ಅಗ್ರಹಾರಬಾಚಹಳ್ಳಿ. ಹೊಯ್ಸಳರ ಕಾಲದ ಪ್ರಸಿದ್ಧ ದೇಗುಲಗಳು ಇಲ್ಲಿವೆ. ಆದರೆ ಈ ಗ್ರಾಮಕ್ಕೆ ಹೋಗುವ ರಸ್ತೆ ಮಾತ್ರ ಸಂಪೂರ್ಣ ಹದಗೆಟ್ಟಿದ್ದು, ಡಾಂಬರು ಕಾಣದೆ ವರ್ಷಗಳೇ ಗತಿಸಿವೆ.

ಈ ರಸ್ತೆಯಲ್ಲಿ ಮೇಲಿಂದ ಮೇಲೆ ಸಂಭವಿಸುವ ಅಪಘಾತದಿಂದ ಜನರು ಆಸ್ಪತ್ರೆ ಸೇರಿದ್ದಾರೆ. ಇಬ್ಬರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇಲ್ಲಿ ಹೊಂಡದಲ್ಲಿ ರಸ್ತೆ ಎನ್ನುವಂತಹ ಸ್ಥಿತಿಯಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯವರಿಗೆ ಹಲವು ಬಾರಿ ಮನವಿ ಮಾಡಿದರೂ ರಸ್ತೆಯ ರಿಪೇರಿ ಮಾಡಿಸಿಲ್ಲ.

ಜನಪ್ರತಿನಿಧಿಗಳು ಇದರ ಬಗ್ಗೆ ತಲೆ ಕಡೆಸಿಕೊಂಡಿಲ್ಲ. ಈಗಲಾದರೂ ರಸ್ತೆ ದುರಸ್ತಿ ಮಾಡಿ ಮುಂದಾಗಬಹುದಾದ ಅನಾಹುತ ತಪ್ಪಿಸಿ ಎಂಬುದು ಈಭಾಗದ ಜನರ ಪರ ಮನವಿ. ಟೆಂಪೊ ಶ್ರೀನಿವಾಸ್ ಕರವೇ ತಾಲ್ಲೂಕು ಘಟಕದ ಕಾರ್ಯದರ್ಶಿ, ಅಗ್ರಹಾರಬಾಚಹಳ್ಳಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.