ADVERTISEMENT

8ರಂದು ಪುಟ್ಟಣ್ಣಯ್ಯಗೆ ‘ಹಸಿರು ನಮನ’

ಮುಖ್ಯಮಂತ್ರಿ ಸಿದ್ದರಾಮಯ್ಯ, ವಿವಿಧ ಸಚಿವರು, ಶಾಸಕರು, ಸಾಹಿತಿಗಳು, ಚಿಂತಕರು ಭಾಗಿ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2018, 8:53 IST
Last Updated 5 ಮಾರ್ಚ್ 2018, 8:53 IST

ಪಾಂಡವಪುರ: ಪಟ್ಟಣದಲ್ಲಿ ಮಾರ್ಚ್‌ 8ರಂದು ‘ಜನ ಸಮುದಾಯದ ದನಿ ಪುಟ್ಟಣ್ಣಯ್ಯ ಅವರಿಗೆ ಹಸಿರು ನಮನ’ ಎಂಬ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ ತಿಳಿಸಿದರು.

‘ರೈತರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಹಾಗೂ ದುಡಿಯುವ ವರ್ಗದ ಜನರು ಭಾಗವಹಿಸಿ ಪುಟ್ಟಣ್ಣಯ್ಯ ಅವರಿಗೆ ಹಸಿರು ನಮನ ಸಲ್ಲಿಸಲಿದ್ದಾರೆ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಐದುದೀಪ ವೃತ್ತದಿಂದ ಪಾಂಡವ ಕ್ರೀಡಾಂಗಣದವರೆಗೆ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಸಮಾವೇಶ ನಡೆಯಲಿದೆ.

ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು, ಶಾಸಕರು, ಹಿರಿಯ ರಾಜಕಾರಣಿಗಳು, ಅಧಿಕಾರಿಗಳು, ಚಿಂತಕರು, ಸಾಹಿತಿಗಳು ಇದರಲ್ಲಿ ಭಾಗವಹಿಸಲಿದ್ದಾರೆ ಎಂದರು.

ಸಾಹಿತಿ ದೇವನೂರ ಮಹಾದೇವ, ಗಾಂಧಿವಾದಿ ಎಚ್.ಎಸ್.ದೊರೆಸ್ವಾಮಿ, ನಿಡುಮಾಮಿಡಿ ಸ್ವಾಮೀಜಿ ಭಾಗವಹಿಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.