ADVERTISEMENT

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು

​ಪ್ರಜಾವಾಣಿ ವಾರ್ತೆ
Published 27 ಜುಲೈ 2019, 10:19 IST
Last Updated 27 ಜುಲೈ 2019, 10:19 IST
   

ಮದ್ದೂರು: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಲ್ಲಿನಗೆಜ್ಜಲಗೆರೆ ಬಳಿಸ್ವಿಫ್ಟ್ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಎದುರಿನಿಂದ ಬರುತ್ತಿದ್ದ ರಾಜ್ಯ ಸಾರಿಗೆ ಬಸ್‌ಗೆ ಗುದ್ದಿದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.

ಶನಿವಾರಸಂಭವಿಸಿದ ಈ ಭೀಕರ ಅಪಘಾತದಲ್ಲಿ,ರವಿ(30), ಮಂಜುಳಾ(25) ದಂಪತಿ ಹಾಗೂ ಅವರ ಮಕ್ಕಳಾದಸಾಗರ್(6), ಸುಕನ್ಯಾ(10) ಸಾವಿಗೀಡಾಗಿದ್ದಾರೆ. ಮೃತರು ಮಂಡ್ಯ ತಾಲ್ಲೂಕಿನ ಹೆಬ್ಬಕವಾಡಿ ಗ್ರಾಮದವರಾಗಿದ್ದು, ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿ ವಾಸವಾಗಿದ್ದರು. ಭಾನುವಾರ ರಜೆಯಿದ್ದ ಕಾರಣದಿಂದ ಊರಿಗೆ ಬರುತ್ತಿದ್ದರು ಎನ್ನಲಾಗಿದೆ.

ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.

ADVERTISEMENT

ಮಿಮ್ಸ್ ಶವಾಗಾರದ ಬಳಿ ಕುಟುಂಬ ಸದಸ್ಯರು ಹಾಗೂ ಸಂಬಂಧಿಕರ ರೋದನ ಮುಗಿಲು ಮುಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.