ಮದ್ದೂರು: ಪಟ್ಟಣದ ಹೊಳೆ ಆಂಜನೇಯಸ್ವಾಮಿ ದೇವಾಲಯಕ್ಕೆ ನಟ ದೊಡ್ಡಣ್ಣ ಭೇಟಿ ನೀಡಿ, ಸುಮಲತಾ ಅಂಬರೀಷ್ ಅವರ ಗೆಲುವಿಗೆ ವಿಶೇಷ ಪೂಜೆ ಸಲ್ಲಿಸಿದರು.
1 ರೂಪಾಯಿ 25 ಪೈಸೆಯನ್ನು ಹರಕೆ ಮಾಡಿಕೊಂಡು ಆಂಜನೇಯ ಸ್ವಾಮಿಗೆ 5 ಪ್ರದಕ್ಷಿಣೆ ಹಾಕಿದರು.
ಬಳಿಕ ಮಾತನಾಡಿದ ಅವರು, ‘ಸುಮಲತಾ ಗೆಲುವಿಗಾಗಿ ಹರಕೆ ಕಟ್ಟಿದ್ದೇನೆ. ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದು, ಆಶೀರ್ವಾದ ಮಾಡುತ್ತಾನೆ’ ಎಂದರು.
ದೇಗುಲದ ಪ್ರಧಾನ ಅರ್ಚಕ ಪ್ರದೀಪ್ ಆಚಾರ್ಯ, ಸುರೇಶ್ ಆಚಾರ್ಯ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.