ADVERTISEMENT

ಕಾರಿಗೆ ಪೆಟ್ರೋಲ್‌ ಹಾಕಿಸಿಕೊಡದಿದ್ದರೆ ಇಲ್ಲೇ ಕೂರುತ್ತೇನೆ: ವೆಂಕಟ್‌‌ ರಂಪ

​ಪ್ರಜಾವಾಣಿ ವಾರ್ತೆ
Published 9 ಜೂನ್ 2020, 4:40 IST
Last Updated 9 ಜೂನ್ 2020, 4:40 IST
ಶ್ರೀರಂಗಪಟ್ಟಣದಲ್ಲಿ ನಟ ‘ಹುಚ್ಚ’ ವೆಂಕಟ್‌ ಸೋಮವಾರ ಪೊಲೀಸರ ಜತೆ ವಾಗ್ವಾದ ನಡೆಸಿದರು
ಶ್ರೀರಂಗಪಟ್ಟಣದಲ್ಲಿ ನಟ ‘ಹುಚ್ಚ’ ವೆಂಕಟ್‌ ಸೋಮವಾರ ಪೊಲೀಸರ ಜತೆ ವಾಗ್ವಾದ ನಡೆಸಿದರು   

ಶ್ರೀರಂಗಪಟ್ಟಣ: ನಟ ‘ಹುಚ್ಚ’ ವೆಂಕಟ್‌ ಸಾರ್ವಜನಿಕರ ಮೇಲೆ ಹಲ್ಲೆ ಮಾಡಿ ರಂಪಾಟ ನಡೆಸಿದ್ದಾರೆ.

ಭಾನುವಾರ ಸಂಜೆ ಕಾವೇರಿ ಸಂಗಮ ಬಳಿ ಕಾಣಿಸಿಕೊಂಡ ಅವರು, ‘ಕಾರಿಗೆ ಪೆಟ್ರೋಲ್‌ ಹಾಕಿಸಿಕೊಡಿ, ಅಲ್ಲಿಯವರೆಗೆ ಇಲ್ಲೇ ಠಿಕಾಣಿ ಹೂಡುತ್ತೇನೆ’ ಎಂದು ಪಟ್ಟು ಹಿಡಿದಿದ್ದಾರೆ. ಸ್ಥಳೀಯರು ಪೆಟ್ರೋಲ್‌ ತರಿಸಿಕೊಟ್ಟು, ಹಣವನ್ನೂ ನೀಡಿದ್ದಾರೆ. ರಹಮತ್‌ಉಲ್ಲಾ ಎಂಬುವರ ಮೇಲೆ ಹಲ್ಲೆ ಮಾಡಿದ್ದಾರೆ. ಸ್ಥಳೀಯರು ಪೊಲೀಸರನ್ನು ಕರೆಸಿ ಕಳುಹಿಸಿದ್ದಾರೆ.

ಸೋಮವಾರ ಮುಂಜಾನೆ ಪಟ್ಟಣದ ಶ್ರೀರಂಗನಾಥಸ್ವಾಮಿ ದೇವಾಲಯ ಬಳಿ ಕಾಣಿಸಿಕೊಂಡ ವೆಂಕಟ್‌, ಇಬ್ಬರ ಮೇಲೆ ಏಕಾಏಕಿ ಹಲ್ಲೆ ಮಾಡಿದ್ದಾರೆ. ಪೊಲೀಸರ ಜತೆ ವಾಗ್ವಾದ ನಡೆಸಿ ಅವರಿಂದಲೂ ಹಣ ಪಡೆದಿದ್ದಾರೆ ಎನ್ನಲಾಗಿದೆ.

ADVERTISEMENT

ವೆಂಕಟ್‌ ಅವರನ್ನು ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದೇವೆ ಎಂದು ಎಸ್‌ಐ ಮುದ್ದು ಮಹದೇವು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.