ADVERTISEMENT

ಮಂಡ್ಯ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಏಕಾಂಗಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2020, 2:38 IST
Last Updated 25 ಸೆಪ್ಟೆಂಬರ್ 2020, 2:38 IST
ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಪುರಸಭೆ ಮಾಜಿ ಅಧ್ಯಕ್ಷ ಹೊನ್ನಗಿರಿಗೌಡ ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಗುರುವಾರ ಪ್ರತಿಭಟನೆ ನಡೆಸಿದರು
ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಪುರಸಭೆ ಮಾಜಿ ಅಧ್ಯಕ್ಷ ಹೊನ್ನಗಿರಿಗೌಡ ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಗುರುವಾರ ಪ್ರತಿಭಟನೆ ನಡೆಸಿದರು   

ಮಂಡ್ಯ: ‘ಸಹಕಾರ ಕ್ಷೇತ್ರದಲ್ಲಿದ್ದ ಪಿಎಸ್‌ಎಸ್‌ಕೆ ದುರಾಡಳಿತ, ಕಂದಾಯ ಇಲಾಖೆ, ಪಾಂಡವಪುರ ಪುರಸಭೆಯಲ್ಲಿನ ದುರಾಡಳಿತದ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿ ಪುರಸಭೆ ಮಾಜಿ ಅಧ್ಯಕ್ಷ ಹೊನ್ನಗಿರಿಗೌಡ ಗುರುವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಏಕಾಂಗಿ ಪ್ರತಿಭಟನೆ ನಡೆಸಿದರು.

‘ಸಹಕಾರ ಕ್ಷೇತ್ರದಲ್ಲಿ ಚೆನ್ನಾಗಿ ನಡೆಯುತ್ತಿದ್ದ ಪಿಎಸ್‌ಎಸ್‌ಕೆ ಕಾರ್ಖಾನೆಯನ್ನು ದುರಾಡಳಿತದಿಂದ ನಷ್ಟವಾಗಿ ಮುಚ್ಚಲು ಕಾರಣರಾದ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೇ ಪಾಂಡವಪುರ ಪುರಸಭೆಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದ್ದು, ಸಾಮಾನ್ಯ ಜನರ ಕೆಲಸ ಕಾರ್ಯಗಳು ಆಗದೆ ಪರದಾಡುವಂತಾಗಿದೆ. ಕಂದಾಯ ಇಲಾಖೆಯೂ ಸಹ ಇದೇ ಹಾದಿಯಲ್ಲಿದ್ದು, ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT