ADVERTISEMENT

ಭಾರತೀನಗರ | ವಿವಿಧೆಡೆ ಅಂಬೇಡ್ಕರ್ ಜಯಂತಿ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2025, 13:23 IST
Last Updated 15 ಏಪ್ರಿಲ್ 2025, 13:23 IST
ಭಾರತೀನಗರದ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಗ್ರಾಮ ಸಭೆ ಹಾಗೂ ಅಂಬೇಡ್ಕರ್ ಜಯಂತಿಯಲ್ಲಿ ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ಲ್ಯಾಪ್‌ಟಾಪ್, ಸೋಲಾರ್ ದೀಪ, ಹೊಲಿಗೆ ಯಂತ್ರ ವಿತರಿಸಲಾಯಿತು
ಭಾರತೀನಗರದ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಗ್ರಾಮ ಸಭೆ ಹಾಗೂ ಅಂಬೇಡ್ಕರ್ ಜಯಂತಿಯಲ್ಲಿ ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ಲ್ಯಾಪ್‌ಟಾಪ್, ಸೋಲಾರ್ ದೀಪ, ಹೊಲಿಗೆ ಯಂತ್ರ ವಿತರಿಸಲಾಯಿತು   

ಭಾರತೀನಗರ: ಇಲ್ಲಿನ ವಿವಿಧ ಗ್ರಾಮ ಪಂಚಾಯಿತಿ, ವಿವಿಧ ಸಂಘಟನೆಗಳಿಂದ ಅಂಬೇಡ್ಕರ್‌ ಜಯಂತಿಯನ್ನು ಆಚರಿಸಲಾಯಿತು.

ಗ್ರಾಮ ಪಂಚಾಯಿತಿ ಆವರಣದಲ್ಲಿ ಗ್ರಾಮ ಸಭೆ ಹಾಗೂ ಅಂಬೇಡ್ಕರ್‌ ಜಯಂತಿ ಆಚರಿಸಿದ್ದು, ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ಲ್ಯಾಪ್‌ಟಾಪ್‌, ಸೋಲಾರ್‌ ದೀಪ, ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.

ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಧಾ ಮಾತನಾಡಿ, ‘ಅಂಬೇಡ್ಕರ್ ಸಂವಿಧಾನದ ಮೂಲಕ ದೇಶದಲ್ಲಿ ಸಮಾನತೆಗೆ ನಾದಿ ಹಾಡಿದ್ದು, ಜಾತೀಯತೆ ತೊಲಗಿಸಲು ಶ್ರಮಿಸಿದ್ದಾರೆ’ ಎಂದು ಹೇಳಿದರು.

ADVERTISEMENT

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಭಾಗ್ಯ, ಉಪಾಧ್ಯಕ್ಷೆ ಸುವರ್ಣ, ಸದಸ್ಯರಾದ ಪುಟ್ಟರಾಮು, ಶ್ರೀನಿವಾಸ್‌, ವೆಂಕಟೇಶ್‌, ರಾಘವೇಂದ್ರ, ಮಂಜುನಾಥ್‌, ವಿನಯ್‌ಕುಮಾರ್‌, ಸಿ.ವೆಂಕಟೇಶ್‌, ಮಹದೇವಮ್ಮ, ಕೌಶಲ್ಯ, ಮಿಥುನ್‌ಕುಮಾರ್‌, ರಾಮಚಂದ್ರೇಗೌಡ, ವಿ.ವಿಜಯ, ಜಿ.ಟಿ.ರಂಜಿತಾ ಮತ್ತಿತರರಿದ್ದರು.

ಇಲ್ಲಿನ ಕೆ.ಎಂ.ದೊಡ್ಡಿ ಪೊಲೀಸ್‌ ಅಂಬೇಡ್ಕರ್‌ ಜಯಂತಿ ಆಚರಿಸಲಾಯಿತು. ಅಂಬೇಡ್ಕರ್‌ ಭಾವಚಿತ್ರಕ್ಕೆ ಅಧಿಕಾರಿಗಳು, ಸಿಬ್ಬಂದಿ ಪುಷ್ಪನಮನ ಸಲ್ಲಿಸಿದರು.

ಇನ್‌ಸ್ಪೆಕ್ಟರ್ ಆನಂದ್‌ ಮಾತನಾಡಿದರು.

ಆರೋಗ್ಯ ಕೇಂದ್ರದಲ್ಲಿ ಸ್ಥಾನಿಕ ವೈದ್ಯಾಧಿಕಾರಿ ಅರ್ಜುನ್‌, ವೈದ್ಯರಾದ ಆನಂದ್‌, ಜಗದೀಶ್‌, ಸೌಮ್ಯ ಹಾಗೂ ಸಿಬ್ಬಂದಿ ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅಂಬೇಡ್ಕರ್‌ ಜಯಂತಿ ಆಚರಿಸಿದರು.

ತಾಲ್ಲೂಕು ಅಂಬೇಡ್ಕರ್‌ ಪ್ರಶಸ್ತಿಗೆ ಭಾಜನರಾದ ಮುಡೀನಹಳ್ಳಿ ತಿಮ್ಮಯ್ಯ ಅವರನ್ನು ಅಭಿನಂದಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.