ಭಾರತೀನಗರ: ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯವು ನೀಡುವ ‘ಪಂಚಾಯತ್ ಪುರಸ್ಕಾರ- 2020’ಕ್ಕೆ ಸಮೀಪದ ಅಣ್ಣೂರು ಗ್ರಾಮ ಪಂಚಾಯಿತಿ ಭಾಜನವಾಗಿದೆ.
ಸಾರ್ವಜನಿಕ ಸೇವೆಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಕೈಗೊಂಡಿ ರುವ ಕ್ರಮಗಳನ್ನು ಆಧರಿಸಿ ಅಣ್ಣೂರು ಗ್ರಾ.ಪಂ. ಅನ್ನು ದೀನ ದಯಾಳ್ ಉಪಾಧ್ಯಾಯ ಪಂಚಾ ಯತ್ ಸಶಕ್ತೀಕರಣ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹10 ಲಕ್ಷ ನಗದು ಒಳಗೊಂಡಿದೆ.
ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯಡಿ ಅನುಷ್ಠಾನಗೊಂಡಿರುವ ಹಲವಾರು ಜನಸ್ನೇಹಿ ಚಟುವಟಿಕೆ ಗಳು, ಕಾರ್ಯಕ್ರಮ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.