ಪಾಂಡವಪುರ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಯುವಕನೊಬ್ಬ ಕಾನ್ಸ್ಟೆಬಲ್ ಅಭಿಷೇಕ್ ಎಂಬವರ ಕೊರಳಪಟ್ಟಿ ಹಿಡಿದು ಹಲ್ಲೆ ಮಾಡಿದ ಘಟನೆ ಶನಿವಾರ ನಡೆದಿದೆ. ಆ ಸಂದರ್ಭದಲ್ಲಿ ಇತರೆ ಪೊಲೀಸ್ ಸಿಬ್ಬಂದಿಯೊಂದಿಗೂ ತಳ್ಳಾಟವಾಗಿದ್ದು, ಘಟನೆಯ ವಿಡಿಯೊ ಶನಿವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.
ಪಟ್ಟಣದ ಹಿರೋಡೆ ಬೀದಿಯ ಪಿ.ಎಸ್.ಜಗದೀಶ್ ಅವರ ಪುತ್ರ ಸಾಗರ್ (30) ಆರೋಪಿ. ಜಮೀನು ವಿವಾದದ ಸಂಬಂಧ ಪಟ್ಟಣದ ಲಕ್ಷ್ಮೀನಾರಾಯಣ ಎಂಬವರು ಆರೋಪಿ ವಿರುದ್ಧ ದೂರು ದಾಖಲಿಸಿದ್ದರಿಂದ, ಇಬ್ಬರನ್ನೂ ಠಾಣೆಗೆ ಕರೆಸಿದ ವೇಳೆ ಘಟನೆ ನಡೆದಿದೆ.
‘ಠಾಣೆಯ ಆವರಣದಲ್ಲಿದ್ದ ಕುರ್ಚಿಯಲ್ಲಿ ಕುಳಿತುಕೊಳ್ಳುವ ವಿಚಾರದಲ್ಲಿ ಇಬ್ಬರ ಮಧ್ಯೆ ವಾಗ್ವಾದ ನಡೆದಿತ್ತು. ಆಗ ಮಧ್ಯಪ್ರವೇಶಿಸಿದ ಕಾನ್ಸ್ಟೆಬಲ್ ಅಭಿಷೇಕ್, ಆರೋಪಿಯನ್ನು ಸಮಾಧಾನಪಡಿಸಲು ಯತ್ನಿಸಿದ್ದರು. ಅದರಿಂದ ಮತ್ತಷ್ಟು ಕೋಪಗೊಂಡ ಆರೋಪಿಯು ಅವರ ಕೊರಳಪಟ್ಟಿಯನ್ನೇ ಹಿಡಿದು ಹಲ್ಲೆ ನಡೆಸಿದ. ಅಲ್ಲಿಯೇ ಕರ್ತವ್ಯದಲ್ಲಿದ್ದ ಕಾನ್ಸ್ಟೆಬಲ್ಗಳಾದ ಲಕ್ಷ್ಮೀ ಮತ್ತು ಆನಂದ ಅವರು ಜಗಳ ಬಿಡಿಸಲು ಮುಂದಾದಾಗಲೂ, ಅವರಿಗೂ ಎಚ್ಚರಿಕೆ ನೀಡಿದ್ದ. ಕುಡಿಯುವ ನೀರಿನ ಕ್ಯಾನ್ ಎತ್ತಿಕೊಂಡು ಬಿಸಾಡಿದ್ದರಿಂದ, ಟೇಬಲ್ ಮೇಲಿದ್ದ ದಾಖಲೆಗಳೂ ಹಾಳಾಗಿವೆ’ ಎಂದು ಪೊಲೀಸರು ತಿಳಿಸಿದ್ದಾರೆ.
‘ಅಭಿಷೇಕ್ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಿ, ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ’ ಎಂದಿದ್ದಾರೆ.
ಘಟನೆಯ ವಿವರ: ಪಟ್ಟಣದ ಲಕ್ಷ್ಮೀನಾರಾಯಣ ಹಾಗೂ ಸಾಗರ್ ಅವರ ನಡುವೆ ಜಮೀನಿನ ವಿಚಾರವಾಗಿ ಜಗಳವಾಗಿದೆ. ಈ ಸಂಬಂಧ ಲಕ್ಷ್ಮೀನಾರಾಯಣ ಅವರು ಸಾಗರ ಅವರ ಮೇಲೆ ದೂರು ದಾಖಲಿಸಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಲಕ್ಷ್ಮೀನಾರಾಯಣ ಮತ್ತು ಸಾಗರ್ ಅವರನ್ನು ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಠಾಣೆಯ ಆವರಣದಲ್ಲಿ ಸಾರ್ವಜನಿಕರಿಗಾಗಿ ಹಾಕಿರುವ ಆಸನಗಳಲ್ಲಿ ಲಕ್ಷ್ಮೀನಾರಾಯಣ ಮತ್ತು ಸಾಗರ ಅವರು ಕುಳಿತುಕೊಳ್ಳುವ ವಿಚಾರದಲ್ಲಿ ಮಾತಿಗೆ ಮಾತು ನಡೆದಿದೆ. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸ್ ಅಭಿಷೇಕ್ ಅವರು ಸಾಗರ ಅವರನ್ನು ತಳ್ಳಿ ಸಮಾದಾನಪಡಿಸಲು ಯತ್ನಿಸಿದ್ದಾರೆ. ಆದರೆ ಮೊದಲೇ ಕೋಪಗೊಂಡಿದ್ದ ಸಾಗರ್ ಅವರು ಪೊಲೀಸ್ ಅಭಿಷೇಕ್ ಅವರ ಕೊರಳಪಟ್ಟಿ ಹಿಡಿದು ಹಲ್ಲೆ ನಡೆಸಿದ್ದಾರೆ. ಕರ್ತವ್ಯದಲ್ಲೇ ಇದ್ದ ಪೊಲೀಸರುಗಳಾದ ಲಕ್ಷ್ಮೀ ಮತ್ತು ಆನಂದ ಅವರು ಮಧ್ಯ ಪ್ರವೇಶಿಸಿ ಜಗಳ ಬಿಡಿಸಲು ಮುಂದಾಗಿದ್ದಾರೆ. ಆದರೆ ಸಾಗರ್ ಅವರು ನನ್ನ ವಿಚಾರಕ್ಕೆ ಬರಬೇಡಿ ಎಂದು ಪೊಲೀಸರಾದ ಲಕ್ಷ್ಮೀ ಮತ್ತು ಆನಂದ ಅವರಿಗೂ ಹೆದರಿಸಿದ್ದಾರೆ. ಅಲ್ಲದೇ ಕುಡಿಯುವ ನೀರಿನ ಕ್ಯಾನ್ ಎತ್ತಿಕೊಂಡು ಬಿಸಾಡಿದ್ದಾರೆ. ಇದರಿಂದಾಗಿ ಕ್ಯಾನಿನ ನೀರು ಟೇಬಲ್ ಮೇಲಿದ್ದ ಪೊಲೀಸ್ ದಾಖಲೆಗಳ ಮೇಲೆ ಬಿದ್ದಿದ್ದು ಹಾಳಾಗಿವೆ. ಬಳಿಕ ಪೊಲೀಸ್ ಅಭಿಷೇಕ್ ಅವರು ಸಾಗರ್ ಮೇಲೆ ನೀಡಿದ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಸಾಗರ್ ಅವರನ್ನು ಬಂಧಿಸಿ ನ್ಹಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.