ADVERTISEMENT

ಬೇಬಿಬೆಟ್ಟದ ಕಲ್ಲು ಕ್ರಷರ್‌ಗಳಿಗೆ ಬೀಗ ಜಡಿದ ಗಣಿ ಅಧಿಕಾರಿಗಳು

​ಪ್ರಜಾವಾಣಿ ವಾರ್ತೆ
Published 26 ಜನವರಿ 2021, 1:40 IST
Last Updated 26 ಜನವರಿ 2021, 1:40 IST
ಪಾಂಡವಪುರ ತಾಲ್ಲೂಕಿನ ಬೇಬಿಬೆಟ್ಟದಲ್ಲಿನ ಕಲ್ಲು ಕ್ರಷರ್‌ಗಳಿಗೆ ಗಣಿ ಅಧಿಕಾರಿಗಳು ಬೀಗ ಜಡಿದು ಸ್ಥಗಿತಗೊಳಿಸಿದರು
ಪಾಂಡವಪುರ ತಾಲ್ಲೂಕಿನ ಬೇಬಿಬೆಟ್ಟದಲ್ಲಿನ ಕಲ್ಲು ಕ್ರಷರ್‌ಗಳಿಗೆ ಗಣಿ ಅಧಿಕಾರಿಗಳು ಬೀಗ ಜಡಿದು ಸ್ಥಗಿತಗೊಳಿಸಿದರು   

ಪ್ರಜಾವಾಣಿ ವಾರ್ತೆ
ಪಾಂಡವಪುರ:
ತಾಲ್ಲೂಕಿನ ಬೇಬಿಬೆಟ್ಟದಲ್ಲಿ ನಡೆಯುತ್ತಿದ್ದ ಕಲ್ಲುಕ್ರಷರ್‌ಗಳಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಬೀಗ ಜಡಿದು ಸ್ಥಗಿತಗೊಳಿಸುವ ಕಾರ್ಯಾಚರಣೆ ನಡೆಸಿದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಟಿ.ವಿ.ಪುಷ್ಪಾ, ಅಧಿಕಾರಿ ನಟಶೇಖರ್ ಹಾಗೂ ಪೊಲೀಸ್ ಅಧಿಕಾರಿಗಳು ಗಣಿಗಾರಿಕೆ ಕ್ರಷರ್‌ಗಳಿಗೆ ದಾಳಿ ನಡೆಸಿ ಕ್ರಷರ್‌ಗಳನ್ನು ಸ್ಥಗಿತಗೊಳಿಸಿದರು.

ಉಪ ವಿಭಾಗಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ತಹಶೀಲ್ದಾರ್ ಪ್ರಮೋದ್ ಎಲ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.