ADVERTISEMENT

ಶ್ರೀರಂಗಪಟ್ಟಣ: ಪಶ್ಚಿಮವಾಹಿನಿಯಲ್ಲಿ ಹರ್ಷನ ಅಸ್ಥಿ ವಿಸರ್ಜನೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2022, 10:04 IST
Last Updated 24 ಫೆಬ್ರುವರಿ 2022, 10:04 IST
 ಬಜರಂಗದಳದ ಕಾರ್ಯಕರ್ತ ಹರ್ಷನ ಅಸ್ಥಿ ವಿಸರ್ಜನಾ ಕಾರ್ಯಕ್ರಮ
ಬಜರಂಗದಳದ ಕಾರ್ಯಕರ್ತ ಹರ್ಷನ ಅಸ್ಥಿ ವಿಸರ್ಜನಾ ಕಾರ್ಯಕ್ರಮ   

ಮಂಡ್ಯ: ಶಿವಮೊಗ್ಗದಲ್ಲಿ ಹತ್ಯೆಯಾದ ಬಜರಂಗದಳದ ಕಾರ್ಯಕರ್ತ ಹರ್ಷನ ಅಸ್ಥಿ ವಿಸರ್ಜನಾ ಕಾರ್ಯಕ್ರಮ ಗುರುವಾರ ಶ್ರೀರಂಗಪಟ್ಟಣ ತಾಲ್ಲೂಕಿನ ಪಶ್ಚಿಮವಾಹಿನಿಯಲ್ಲಿ ನೆರವೇರಿತು.

ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಕಾಳಿ ಮಠದ ಋಷಿ ಕುಮಾರ ಸ್ವಾಮೀಜಿ ಪೂಜಾ ಕೈಂಕರ್ಯ ನೆರವೇರಿಸಿದರು.

ಅರ್ಚಕ ಸಂದೀಪ್ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರುಗಿದವು.

ADVERTISEMENT

ಧರುಮತಿ ನಾರಾಯಣ ಹೋಮ, ಅಸ್ಥಿ ಸಂಚಯನ, ದಶದಾನ ಸೇರಿ ಹಲವು ವಿಧಿವಿಧಾನ ನಡೆಸಲಾಯಿತು.

ನೂರಾರು ಸಂಖ್ಯೆಯ ಶ್ರೀರಾಮಸೇನೆ, ಭಜರಂಗದಳದ ಕಾರ್ಯಕರ್ತರು ಸೇರಿದ್ದರು. 'ಜೈಶ್ರೀರಾಮ್, ಹರ್ಷ ಅಮರ್ ರಹೇ ಘೋಷಣೆ' ಘೊಷಣೆ ಕೂಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.