ಮಂಡ್ಯ: ಚೆಕ್ಪೋಸ್ಟ್ ಸಿಬ್ಬಂದಿ ಕಾರು ನಿಲ್ಲಿಸುವಂತೆ ಕೈ ತೋರಿಸಿದರೂ ಗೃಹಸಚಿವ ಬಸವರಾಜ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ಕಾರನ್ನು ನಿಲ್ಲಿಸಿಲ್ಲ. ಎರಡು ಕಡೆ ನಡೆದಿರುವ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಡಘಟ್ಟ ಹಾಗೂ ಹನಕೆರೆ ಬಳಿ ಚೆಕ್ಪೋಸ್ಟ್ ತೆರೆಯಲಾಗಿದೆ. ಬುಧವಾರ ಬೆಂಗಳೂರಿನಿಂದ ಮೈಸೂರಿಗೆ ಗೃಹಸಚಿವರು ಪ್ರಯಾಣಿಸುತ್ತಿದ್ದರು. ಚೆಕ್ಪೋಸ್ಟ್ ಸಿಬ್ಬಂದಿ ಎರಡೂ ಕಡೆ ಕೈತೋರಿಸಿದರೂ ಕಾರು ನಿಲ್ಲಿಸಿಲ್ಲ. ಸಚಿವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಹೇಳಲಾಗುತ್ತಿದೆ.
‘ಈ ವಿಷಯ ನಮ್ಮ ನಮ್ಮ ಗಮನಕ್ಕೆ ಬಂದಿಲ್ಲ, ಪರಿಶೀಲನೆ ನಡೆಸಲಾಗುವುದು’ ಎಂದು ಚುನಾವಣಾಧಿಕಾರಿಗಳು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.