ನಾಗಮಂಗಲ: ತಾಲ್ಲೂಕಿನ ಬೆಳ್ಳೂರಿನಲ್ಲಿ ಸೋಮವಾರ ರಾತ್ರಿ ನಡೆದ ಗುಂಪು ಘರ್ಷಣೆ ಸಂಬಂಧ ಬೆಳ್ಳೂರು ಠಾಣೆಯ ಪಿಎಸ್ಐ ಬಸವರಾಜು ಚಿಂಚೋಳಿ ಅವರನ್ನು ಬುಧವಾರ ಅಮಾನತು ಮಾಡಲಾಗಿದೆ.
ದೂರು ಸ್ವೀಕರಿಸದೆ, ಕರ್ತವ್ಯ ಲೋಪ ತೋರಿದ ಆರೋಪದ ಮೇರೆಗೆ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅಮಾನತು ಮಾಡಿದ್ದಾರೆ.
ಮೇ 27ರಂದು ರಾತ್ರಿ 2 ಗಂಟೆಯಲ್ಲಿ ಗಾಯಾಳು ಅಭಿಲಾಷ್ ಕುಟುಂಬದ ಸದಸ್ಯರು ಠಾಣೆಗೆ ಬಂದಾಗ ಅಧಿಕಾರಿಯು ದೂರು ಸ್ವೀಕರಿಸಿರಲಿಲ್ಲ. ನಂತರ, ಅವರ ವಿರುದ್ಧ ಎಸ್ಪಿಗೆ ದೂರು ಸಲ್ಲಿಸಿದ್ದರು.
ನಾಗಮಂಗಲ: ತಾಲ್ಲೂಕಿನ ಬೆಳ್ಳೂರಿನಲ್ಲಿ ನಡೆದ ಗುಂಪು ಘರ್ಷಣೆಗೆ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಬಸವರಾಜು ಚಿಂಚೋಳಿ ಅವರನ್ನು ಬುಧವಾರ ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪದ ಆರೋಪದ ಮೇಲೆ ಬಸವರಾಜು ಚಿಂಚೋಳಿ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅವರು ಅಮಾನತು ಮಾಡಿದ್ದಾರೆ.
ದೂರು ಸ್ವೀಕರಿಸಿದೆ ಕರ್ತವ್ಯ ಲೋಪ ತೋರಿದ ಹಿನ್ನಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ. ಮೇ 27ರಂದು ರಾತ್ರಿ 2 ಗಂಟೆಯಲ್ಲಿ ಗಾಯಾಳು ಅಭಿಲಾಷ್ ಕುಟುಂಬ ಸದಸ್ಯರು ಬೆಳ್ಳೂರು ಪೊಲೀಸ್ ಠಾಣೆಗೆ ದೂರು ದಾಖಲಿಸಲು ಬಂದಾಗ ಸಬ್ಇನ್ಸ್ಪೆಕ್ಟರ್ ದೂರು ಸ್ವೀಕಾರ ಮಾಡಿರಲಿಲ್ಲ. ಅವರ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಅಮಾನತು ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.