ADVERTISEMENT

ಮಂಡ್ಯ | ಭೀಮನ ಅಮಾವಾಸ್ಯೆ ಸಂಭ್ರಮ: ವಿವಿಧ ದೇವಾಲಯಗಳಲ್ಲಿ ಭಕ್ತರ ದಂಡು

​ಪ್ರಜಾವಾಣಿ ವಾರ್ತೆ
Published 25 ಜುಲೈ 2025, 2:05 IST
Last Updated 25 ಜುಲೈ 2025, 2:05 IST
ಮಂಡ್ಯ ನಗರದ ಕಾಳಿಕಾಂಬ ದೇವಸ್ಥಾನದ ಸರತಿ ಸಾಲಿನಲ್ಲಿ ನಿಂತ ಭಕ್ತರು ಶ್ರೀ ಬಿಸಿಲು ಮಾರಮ್ಮ ದೇವರ ದರ್ಶನ ಪಡೆದರು
ಮಂಡ್ಯ ನಗರದ ಕಾಳಿಕಾಂಬ ದೇವಸ್ಥಾನದ ಸರತಿ ಸಾಲಿನಲ್ಲಿ ನಿಂತ ಭಕ್ತರು ಶ್ರೀ ಬಿಸಿಲು ಮಾರಮ್ಮ ದೇವರ ದರ್ಶನ ಪಡೆದರು   

ಮಂಡ್ಯ: ಜಿಲ್ಲೆಯಲ್ಲಿ ಭೀಮನ ಅಮಾವಾಸ್ಯೆ ಅಂಗವಾಗಿ ದೇವಾಲಯಗಳಲ್ಲಿ ಪೂಜಾ ಕೈಂಕರ್ಯಗಳು ಗುರುವಾರ ನಡೆದವು, ಜೊತೆಗೆ ದಂಪತಿ ಸಮೇತ ವಿಶೇಷ ಪೂಜೆ ಸಲ್ಲಿಸಿದರು.

ನಗರದ ಕಾಳಿಕಾಂಬ ದೇವಸ್ಥಾನ, ಚಾಮುಂಡೇಶ್ವರಿ ದೇವಸ್ಥಾನ, ಶಂಕರಪುರದಲ್ಲಿರುವ ಗಂಗಾಧರೇಶ್ವರಸ್ವಾಮಿ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಹೂವಿನಿಂದ ಅಲಂಕಾರ ಮಾಡುವ ಮೂಲಕ ದೇವರ ಮೂರ್ತಿಗಳನ್ನು ಬಗೆಬಗೆಯ ಹೂಗಳಿಂದ ಸಿಂಗರಿಸಲಾಗಿತ್ತು. ದೇವರ ದರ್ಶನಕ್ಕೆ ಬಂದ ಭಕ್ತಾಧಿಗಳಿಗೆ ಪ್ರಸಾದ ವಿತರಿಸಲಾಯಿತು.

ಭೀಮನ ಅಮಾವಾಸ್ಯೆ ಅಂಗವಾಗಿ ಪತ್ನಿಯು ತಮ್ಮ ಪತಿಗೆ ಪಾದಪೂಜೆ ಮಾಡಿ ಆಶೀರ್ವಾದ ಪಡೆದುಕೊಂಡರು. ಪತಿಗೆ ಆಯಸ್ಸು ಆರೋಗ್ಯ ಹೆಚ್ಚಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.