ADVERTISEMENT

ಮಾಜಿ ಎಂಎಲ್‌ಸಿ ಎಚ್‌.ಹೊನ್ನಪ್ಪ ನಿಧನ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2023, 12:51 IST
Last Updated 15 ಫೆಬ್ರುವರಿ 2023, 12:51 IST
ಎಚ್‌.ಹೊನ್ನಪ್ಪ
ಎಚ್‌.ಹೊನ್ನಪ್ಪ   

ಮಂಡ್ಯ: ವಿಧಾನ ಪರಿಷತ್‌ ಮಾಜಿ ಸದಸ್ಯ, ಬಿಜೆಪಿ ಮುಖಂಡ ಇಂಡುವಾಳು ಎಚ್‌.ಹೊನ್ನಪ್ಪ (75) ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಂಗಳವಾರ ತಡರಾತ್ರಿ ನಿಧನರಾದರು.

ತಾಲ್ಲೂಕಿನ ಇಂಡುವಾಳು ಗ್ರಾಮದವರಾದ ಅವರು ಕರ್ನಾಟಕ ಕ್ರಾಂತಿರಂಗ ಪಕ್ಷದ ಮೂಲಕ ರಾಜಕಾರಣ ಪ್ರವೇಶ ಮಾಡಿದ್ದರು. 1985ರಿಂದ 1987ರವರೆಗೆ ಮೈಷುಗರ್‌ ಕಾರ್ಖಾನೆ ಅಧ್ಯಕ್ಷರಾಗಿದ್ದರು. ನಂತರ ಜನತಾ ಪಕ್ಷ ಸೇರ್ಪಡೆಯಾಗಿದ್ದರು.

1998ರಿಂದ 2004ರವರೆಗೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದರು. ಜನತಾ ಶಿಕ್ಷಣ ಸಂಸ್ಥೆ ಕಾರ್ಯದರ್ಶಿಯಾಗಿ ದೀರ್ಘಕಾಲ ಕರ್ತವ್ಯ ನಿರ್ವಹಿಸಿದ್ದರು. ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ನಿರ್ದೇಶಕರಾಗಿಯೂ ದುಡಿದಿದ್ದರು.

ADVERTISEMENT

2008ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದ ಅವರು 2012ರವರೆಗೂ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದರು. ಅವರಿಗೆ ಇಬ್ಬರು ಪುತ್ರರು ಇದ್ದಾರೆ. ಇಂಡುವಾಳು ಗ್ರಾಮದ ಜಮೀನಿನಲ್ಲಿ ಬುಧವಾರ ಅವರ ಅಂತ್ಯಕ್ರಿಯೆ ನೆರವೇರಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.