ಶ್ರೀರಂಗಪಟ್ಟಣ: ಇಲ್ಲಿಗೆ ಸಮೀಪದ ರಂಗನತಿಟ್ಟು ಪಕ್ಷಿಧಾಮದಲ್ಲಿ ಮಂಗಳವಾರದಿಂದ ದೋಣಿ ವಿಹಾರ ಪುನರಾರಂಭವಾಗಿದೆ.
ಕಾವೇರಿ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದರಿಂದ ಕಳೆದ 15 ದಿನಗಳಿಂದ ದೋಣಿ ವಿಹಾರವನ್ನು ಸ್ಥಗಿತಗೊಳಿಸಲಾಗಿತ್ತು. ರಂಗನತಿಟ್ಟಿನಲ್ಲಿ ಒಂದು ಮರ ದೋಣಿ ಹಾಗೂ 16 ಫೈಬರ್ ದೋಣಿಗಳಿದ್ದು, ಎಲ್ಲವೂ ನದಿಗೆ ಇಳಿದಿವೆ.
ಪಕ್ಷಿಧಾಮ ಪ್ರವೇಶ ಶುಲ್ಕ ಭಾರತೀಯರಿಗೆ ₹70, ವಿದೇಶಿಯರಿಗೆ ₹400 ಮತ್ತು ದೋಣಿ ವಿಹಾರ ಶುಲ್ಕ ಭಾರತೀಯರಿಗೆ ₹70 ಹಾಗೂ ವಿದೇಶಿಯರಿಗೆ ₹400 ನಿಗದಿಪಡಿಸಲಾಗಿದೆ. ಕ್ಯಾಮೆರಾ ಶುಲ್ಕ, ವಿಶೇಷ ದೋಣಿಗೆ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ ಎಂದು ಪಕ್ಷಿಧಾಮದ ಸಿಬ್ಬಂದಿ ತಿಳಿಸಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.