ನಾಗಮಂಗಲ: ‘ಶಾಸಕನಾಗಿದ್ದಾಗ ಯಾರ ಬಳಿಯೂ ಕೈಯೊಡ್ಡಿಲ್ಲ. ಆದರೆ, ಬೆಂಗಳೂರಿನಲ್ಲಿದ್ದಾಗ ಕಾರ್ಯಕರ್ತರಿಂದ ಅಲ್ಪಸ್ವಲ್ಪ ಹಣ ಪಡೆದಿದ್ದೇನೆ’ ಎಂದು ಮಂಡ್ಯ ಲೋಕಸಭಾ ಉಪ ಚುನಾವಣೆಯ ಜೆಡಿಎಸ್– ಕಾಂಗ್ರೆಸ್ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಹೇಳಿದರು.
ಪಟ್ಟಣದಲ್ಲಿ ಭಾನುವಾರ ನಡೆದ ಜೆಡಿಎಸ್–ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಕಾರ್ಯಕರ್ತರಿಂದ ನಾನು ₹ 5–10 ಪಡೆದಿದ್ದೇನೆ. ಇದೇನೂ ದೊಡ್ಡದಲ್ಲ. ಆದರೆ, ಶಾಸಕನಾಗಿದ್ದಾಗ ಯಾರಿಂದಲೂ ಹಣ ಪಡೆದಿಲ್ಲ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.