ADVERTISEMENT

ಮಂಡ್ಯ: ಯತ್ನಾಳ ವಿರುದ್ಧ ಬಿಎಸ್‌ವೈ ಬೆಂಬಲಿಗರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2023, 1:05 IST
Last Updated 27 ಡಿಸೆಂಬರ್ 2023, 1:05 IST
ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಗುರುವಾರ ಶಾಸಕ ಯತ್ನಾಳ ವಿರುದ್ಧ ಪ್ರತಿಭಟನೆ ನಡೆಸಲಾಯಿತು 
ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಗುರುವಾರ ಶಾಸಕ ಯತ್ನಾಳ ವಿರುದ್ಧ ಪ್ರತಿಭಟನೆ ನಡೆಸಲಾಯಿತು    

ಮಂಡ್ಯ: ‘ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಲಘುವಾಗಿ ಮಾತನಾಡಿದ್ದಾರೆ’ ಎಂದು ಬಿಎಸ್‌ವೈ ಬೆಂಬಲಿಗರು ಮಂಗಳವಾರ ಇಲ್ಲಿ ಪ್ರತಿಭಟಿಸಿದರು. ‘ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಬಾಯಿಗೆ ಬೀಗ ಹಾಕಿಸಬೇಕು’ ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಅಂಚೆ ಮೂಲಕ ಮನವಿ ರವಾನಿಸಿದರು. ಜಿಲ್ಲಾ ಅಂಚೆ ಕಚೇರಿ ಎದುರು ಸೇರಿದ ಕಾರ್ಯಕರ್ತರು ಯತ್ನಾಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು. ‘ದುರ್ವರ್ತನೆ ತೋರುತ್ತಿರುವ ಅವರಿಗೆ ವರಿಷ್ಠರು ಬುದ್ಧಿ ಹೇಳಬೇಕು. ಆಗದಿದ್ದರೆ ಅವರನ್ನು ಸರಿ ದಾರಿಗೆ ತರಲು ನಮಗೇ ಅವಕಾಶ ಕೊಡಬೇಕು’ ಎಂದು ಆಗ್ರಹಿಸಿದರು. ‘‌ಲೋಕಸಭಾ ಚುನಾವಣೆ ವೇಳೆಗೆ ಯತ್ನಾಳ ಹೇಳಿಕೆಗಳು ಗಣನೆಗೆ ಬರುವುದರಿಂದ ಅದಕ್ಕೆ ಅವಕಾಶ ನೀಡಬಾರದು. ಪಕ್ಷದೊಳಗಿರುವವರೇ ಇರಿಸುಮುರಿಸಿನ ಹೇಳಿಕೆ ನೀಡಬಾರದು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.