ADVERTISEMENT

ಮಂಡ್ಯ: ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2021, 3:49 IST
Last Updated 7 ಅಕ್ಟೋಬರ್ 2021, 3:49 IST
ಮಂಡ್ಯ: ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮಂಡ್ಯ: ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಮಂಡ್ಯ: ಕೆಆರ್‌ಎಸ್‌ ಜಲಾಶಯದ ಬಳಿ ಇರುವ ಕಾವೇರಿ ತಾಯಿ ಪ್ರತಿಮೆಗೆ ಗುರುವಾರ ಬೆಳಿಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಂಪತಿ ವಿಶೇಷ ಪೂಜೆ ಸಲ್ಲಿಸಿದರು.

ದಸರಾ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಬಂದಿರುವ ಅವರು ಕೆಆರ್‌ಎಸ್‌ಗೂ ಭೇಟಿ ನೀಡಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದರು. ಪತ್ನಿ ಚನ್ನಮ್ಮ ಅವರ ಜೊತೆ ಸಾಂಪ್ರದಾಯಿಕ ರೇಷ್ಮೆ ಪಂಚೆ, ಶರ್ಟ್‌ ತೊಟ್ಟು ಪೂಜೆಯಲ್ಲಿ ಪಾಲ್ಗೊಂಡರು. ಜೋತಿಷಿ ಭಾನುಪ್ರಕಾಶ್‌ ಶರ್ಮಾ ನೇತೃತ್ವದಲ್ಲಿ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಸಚಿವರಾದ ಆರ್‌.ಅಶೋಕ್‌, ಕೆ.ಸಿ.ನಾರಾಯಣಗೌಡ, ಬೈರತಿ ಬಸವರಾಜ್‌, ಸುನೀಲ್‌ ಕುಮಾರ್‌, ಶಾಸಕ ಅರವಿಂದ ಬೆಲ್ಲದ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.