ADVERTISEMENT

ಮಳವಳ್ಳಿ | ಕಾರದ ಪುಡಿ ಎರಚಿ ಸರ ಅಪಹರಣ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2023, 13:02 IST
Last Updated 10 ಆಗಸ್ಟ್ 2023, 13:02 IST
ಮಳವಳ್ಳಿ ತಾಲ್ಲೂಕಿನ ಅಮೃತೇಶ್ವರನಹಳ್ಳಿ ಗ್ರಾಮಕ್ಕೆ ಡಿವೈಎಸ್ಪಿ ಎನ್.ನವೀನ್ ಕುಮಾರ್ ಹಾಗೂ ಸಿಪಿಐ ಎಂ.ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಳವಳ್ಳಿ ತಾಲ್ಲೂಕಿನ ಅಮೃತೇಶ್ವರನಹಳ್ಳಿ ಗ್ರಾಮಕ್ಕೆ ಡಿವೈಎಸ್ಪಿ ಎನ್.ನವೀನ್ ಕುಮಾರ್ ಹಾಗೂ ಸಿಪಿಐ ಎಂ.ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.   

ಮಳವಳ್ಳಿ: ದಿನಸಿ ಖರೀದಿಸುವ ನೆಪದಲ್ಲಿ ಬಂದ ದುಷ್ಕರ್ಮಿಗಳು ಅಂಗಡಿ ಮಾಲೀಕ ಗ್ರಾಮದ ಚಿಕ್ಕೀರೇಗೌಡರ ಕಣ್ಣಿಗೆ ಕಾರದ ಪುಡಿ ಎರಚಿ 35 ಗ್ರಾಂ ಚಿನ್ನದ ಸರ ದೋಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಅಮೃತೇಶ್ವರನಹಳ್ಳಿಯಲ್ಲಿ ನಡೆದಿದೆ.

ಬುಧವಾರ ಮಧ್ಯಾಹ್ನ ಬೈಕ್‌‌‌ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳ ಪೈಕಿ ಒಬ್ಬ ದಿನಸಿ ಸಾಮಗ್ರಿ ಖರೀದಿಸುತ್ತಿದ್ದ, ಮತ್ತೊಬ್ಬ ಬೈಕ್‌‌‌ನಲ್ಲಿ ಕುಳಿತು ಅಕ್ಕಪಕ್ಕ ಯಾರೂ ಇಲ್ಲದನ್ನು ಗಮನಿಸುತ್ತಿದ್ದ. ಈ ವೇಳೆ ಕಾರದಪುಡಿ ಎರಚಿ ಸರವನ್ನು ಕಸಿದು ಬೈಕ್ ನಲ್ಲಿ ಇಬ್ಬರು ವೇಗವಾಗಿ ಪರಾರಿಯಾಗಿದ್ದಾರೆ.

ಘಟನೆಯಿಂದ ತೀವ್ರ ಅಘಾತಕ್ಕೊಳಗಾದ ಚಿಕ್ಕಿರೇಗೌಡರ ಚೀರಾಟ ಕೇಳಿ ಅಕ್ಕಪಕ್ಕದವರು ಸ್ಥಳಕ್ಕೆ ಬಂದು ಕಣ್ಣಿಗೆ ನೀರು ಹಾಕಿ, ಮಾಹಿತಿ ಪಡೆದು ಕೆಲ ಯುವಕರು ಬೈಕ್ ನನ್ನೂ ಹಿಂಬಾಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ADVERTISEMENT

ಸ್ಥಳಕ್ಕೆ ಡಿವೈಎಸ್ಪಿ ಎನ್.ನವೀನ್ ಕುಮಾರ್, ಸಿಪಿಐ ಎಂ.ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.