ಮಳವಳ್ಳಿ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಿ ಸರ್ಕಾರದ ವಿವಿಧ ಇಲಾಖೆಗಳಿಂದ ಅನುದಾನ ಬಿಡುಗಡೆ ಮಾಡಿಸಲಾಗುತ್ತಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.
ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಸೋಮವಾರ ₹1.43 ಕೋಟಿ ವೆಚ್ಚದ ಎರಡು ಸಿಸಿ ರಸ್ತೆಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗಗಳ ಸಮಗ್ರ ಅಭಿವೃದ್ಧಿಗೆ ಹತ್ತಾರು ಯೋಜನೆಗಳ ಮೂಲಕ ಹಣ ತರಲಾಗಿದೆ. ಪ್ರಮುಖವಾಗಿ ಮೂಲ ಸೌಲಭ್ಯಗಳ ಕೊರತೆ ಎದುರಿಸುತ್ತಿದ್ದ ಶೆಟ್ಟಿಹಳ್ಳಿ ಗ್ರಾಮಸ್ಥರ ಸಾಕಷ್ಟು ವರ್ಷಗಳ ಬೇಡಿಕೆಯಾಗಿದ್ದ ಈ ಎರಡು ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪಟ್ಟಣದ ಸಮೀಪವಿರುವ ಈ ಗ್ರಾಮದ ಪ್ರಗತಿಗೆ ಮತ್ತಷ್ಟು ನೆರವು ನೀಡಲಾಗುವುದು ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಸ್.ಕೆ.ಮನೋಹರ್ ಅರಸು, ಮುಖಂಡರಾದ ಆರ್.ಎನ್. ವಿಶ್ವಾಸ್, ಪ್ರದೀಪ್ ರಾಜೇ ಅರಸು, ಕಿರಣ್, ಸುರೇಶ್, ಚಿಕ್ಕಯ್ಯ, ಚಂದ್ರರಾಜೇ ಅರಸು, ಕರಿಗೌಡ, ಸಿ.ಮಾಧು, ಕೆ.ಜೆ. ದೇವರಾಜು, ಪ್ರಭುಸ್ವಾಮಿ, ಎಂ.ಲಿಂಗರಾಜು, ಟಿ.ಸಿ.ಚೌಡಯ್ಯ, ಚೇತನ್ ನಾಯಕ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.