ADVERTISEMENT

ಬಿಜೆಪಿ ಸಂಪರ್ಕದಲ್ಲಿ ಹತ್ತಕ್ಕೂ ಹೆಚ್ಚು ಕಾಂಗ್ರೆಸ್‌ ಶಾಸಕರು: ಸಚಿವ ಅಶೋಕ

​ಪ್ರಜಾವಾಣಿ ವಾರ್ತೆ
Published 25 ಜನವರಿ 2023, 21:27 IST
Last Updated 25 ಜನವರಿ 2023, 21:27 IST
ಆರ್.ಅಶೋಕ
ಆರ್.ಅಶೋಕ   

ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ): ‘ಹತ್ತಕ್ಕೂ ಹೆಚ್ಚು ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರಲು ಆಸಕ್ತಿ ತೋರಿದ್ದಾರೆ. ಮುಖ್ಯಮಂತ್ರಿ ಮತ್ತು ನಾನು ಆ ಪಕ್ಷದ ಇಬ್ಬರು ಶಾಸಕರೊಂದಿಗೆ ಮಂಗಳವಾರವೂ ಮಾತುಕತೆ ನಡೆಸಿದ್ದೇವೆ’ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದರು.

ಇಲ್ಲಿ ಬುಧವಾರ ನಡೆದ ಬಿಜೆಪಿ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತ ಪಡೆಯುತ್ತದೆ ಎಂಬ ಭ್ರಮೆಯಲ್ಲಿ ಆ ಪಕ್ಷದ ಮುಖಂಡರಿದ್ದಾರೆ. ಕಾಂಗ್ರೆಸ್‌ 70 ಸ್ಥಾನ ಗೆಲ್ಲುವುದೂ ಕಷ್ಟ. 123 ಸ್ಥಾನ ಗೆಲ್ಲುವುದಾಗಿ ಹೇಳುತ್ತಿರುವ ಜೆಡಿಎಸ್‌ 13 ಸ್ಥಾನ ಗೆದ್ದರೆ ದೊಡ್ಡದು. ಬಿಜೆಪಿ 120ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಮತ್ತೆ ಸರ್ಕಾರ ರಚಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

‘ಬಿಜೆಪಿ ಸೇರುವಂತೆ ಸಂಸದೆ ಸುಮಲತಾ ಅಂಬರೀಶ್‌ ಅವರನ್ನು ಆಹ್ವಾನಿಸಿದ್ದೇವೆ. ಅವರೊಂದಿಗೆ ನಾನೂ ಮಾತನಾಡಿದ್ದು ಸಕಾರಾತ್ಮವಾಗಿ ಸ್ಪಂದಿಸಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.