ಮಂಡ್ಯ: ಹೊಸದಾಗಿ ಗುರುವಾರ 7 ಮಂದಿಯಲ್ಲಿ ಕೋವಿಡ್– 19 ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 357ಕ್ಕೆ ಏರಿಕೆಯಾಗಿದೆ.
ಗುರುವಾರ ಪತ್ತೆಯಾದ ಎಲ್ಲರೂ ಮುಂಬೈ ವಲಸಿಗರಾಗಿದ್ದು ಕೆ.ಆರ್.ಪೇಟೆ ತಾಲ್ಲೂಕಿಗೆ ಸೇರಿದ್ದಾರೆ. ಜೂನ್ ಮೊದಲ ವಾರದಲ್ಲಿ ಮುಂಬೈನಿಂದ ಬಂದ ಇವರನ್ನು ಹಾಸ್ಟೆಲ್ಗಳಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಗಂಟಲು ದ್ರವ ಪರೀಕ್ಷೆಯಲ್ಲಿ ಇವರಿಗೆ ಕೋವಿಡ್–19 ದೃಢಪಟ್ಟಿದೆ. ಎಲ್ಲರನ್ನೂ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರಲ್ಲಿ ಯಾವುದೇ ರೋಗ ಲಕ್ಷಣ ಕಂಡುಬಂದಿಲ್ಲ, ಆರೋಗ್ಯವಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಈಗಲೂ ಮುಂಬೈನಿಂದ ವಲಸಿಗರು ಬರುತ್ತಿದ್ದು ಅವರನ್ನು ಚೆಕ್ಪೋಸ್ಟ್ಗಳಲ್ಲಿ ತಡೆದು ಕ್ವಾರಂಟೈನ್ ಮಾಡಲಾಗುತ್ತಿದೆ. ಇನ್ನೂ 582 ಮಂದಿಯ ಕೋವಿಡ್ ಪರೀಕ್ಷಾ ವರದಿ ಬರಬೇಕಾಗಿದೆ. 312 ಮಂದಿಯನ್ನು ವಿವಿಧ ಹಾಸ್ಟೆಲ್ನಲ್ಲಿ ಕ್ವಾರಂಟೈನ್ ಮಾಡಲಾಗಿದೆ.
15 ಮಂದಿ ಬಿಡುಗಡೆ: ಕೋವಿಡ್ನಿಂದ ಗುಣಮುಖರಾದ 15 ಮಂದಿಯನ್ನು ಗುರುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಒಟ್ಟು 357 ರೋಗಿಗಳಲ್ಲಿ 303 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 53 ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ಧಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.