ADVERTISEMENT

ಮಗುವನ್ನು ಕೊಂದು ದಂಪತಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 11 ಜನವರಿ 2022, 16:17 IST
Last Updated 11 ಜನವರಿ 2022, 16:17 IST

ನಾಗಮಂಗಲ: ಕೌಟುಂಬಿಕ ಕಲಹದಿಂದ ಬೇಸತ್ತ ದಂಪತಿ ತಮ್ಮ ಒಂದೂವರೆ ವರ್ಷದ ಮಗುವನ್ನು ಕೊಂದು ತಾವೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಮಾಡಿಕೊಂಡ ಘಟನೆ ತಾಲ್ಲೂಕಿನ ಗಂಗವಾಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ತನು (ಒಂದೂವರೆ ವರ್ಷ), ರಘು 28), ತನುಶ್ರೀ (24) ಮೃತಪಟ್ಟವರು. ಮಂಡ್ಯದ ಷುಗರ್‌ಟೌನ್‌ ನಿವಾಸಿಯಾಗಿದ್ದ ರಘು ಪತ್ನಿಯ ತವರು ಮನೆ ಗಂಗವಾಡಿಗೆ ತೆರಳಿದ್ದರು. ಕೌಟುಂಬಿಕ ಕಲಹದಿಂದಾಗಿ ವಾರದ ಹಿಂದೆಯೇ ತನುಶ್ರೀ ತವರು ಮನೆಗೆ ತೆರಳಿದ್ದರು. ಮಂಗಳವಾರ ಪತಿ–ಪತ್ನಿ ಜಗಳವಾಡುತ್ತಿದ್ದರು ಎನ್ನಲಾಗಿದೆ. ಸಂಜೆ ಮಗುವನ್ನು ಕೊಂದು ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಘಟನೆ ಸಂಬಂಧ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ತಾಲ್ಲೂಕು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.