ಮಂಡ್ಯ: ಕೋವಿಡ್ ಕೇರ್ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ರೋಗಿಗಳು ಮಂಗಳವಾರ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 79ಕ್ಕೆ ಏರಿಕೆಯಾಗಿದೆ.
ಮಂಡ್ಯ ತಾಲ್ಲೂಕಿನ 47 ವರ್ಷದ ಮಹಿಳೆ, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲ್ಲೂಕಿನ 40 ವರ್ಷದ ವ್ಯಕ್ತಿ, 44 ವರ್ಷದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಕೋವಿಡ್ ಕಾರ್ಯಸೂಚಿ ಅನ್ವಯ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಮಂಗಳವಾರ ಒಂದೇದಿನ 213 ಮಂದಿಯಲ್ಲಿ ಕೋವಿಡ್–19 ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,260ಕ್ಕೆ ಏರಿಕೆಯಾಗಿದೆ. ಮಂಡ್ಯ ತಾಲ್ಲೂಕಿನ 65 ಮಂದಿ, ಕೆ.ಆರ್.ಪೇಟೆ 51, ಪಾಂಡವಪುರ 32, ಶ್ರೀರಂಗಪಟ್ಟಣ 21, ಮದ್ದೂರು 20, ನಾಗಮಂಗಲ 18, ಮಳವಳ್ಳಿ ತಾಲ್ಲೂಕಿನ 6 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಕೋವಿಡ್ನಿಂದ ಗುಣಮುಖರಾದ 130 ಮಂದಿಯನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಯಿತು. ಮಂಡ್ಯ ತಾಲ್ಲೂಕಿನ 53, ಶ್ರೀರಂಗಪಟ್ಟಣ 24, ನಾಗಮಂಗಲ 20, ಮದ್ದೂರು, ನಾಗಮಂಗಲ ತಾಲ್ಲೂಕಿನ ತಲಾ 10 ಮಂದಿ, ಕೆ.ಆರ್.ಪೇಟೆ ತಾಲ್ಲೂಕಿನ 8 ಮಂದಿಯನ್ನು ಬಿಡುಗಡೆ ಮಾಡಲಾಯಿತು. ಒಟ್ಟು ರೋಗಿಗಳಲ್ಲಿ 5,195 ಗುಣಮುಖರಾಗಿದ್ದಾರೆ. 1,984 ಪ್ರಕರಣಗಳು ಸಕ್ರಿಯವಾಗಿವೆ.
ಕೋವಿಡ್ ಅಂಕಿ–ಅಂಶ
ಜಿಲ್ಲೆಯಲ್ಲಿ ಒಟ್ಟು: 7,260
ಸಕ್ರಿಯ ಪ್ರಕರಣ: 1,984
ಏರಿಕೆ: 213
ಗುಣಮುಖ: 5,195
ಏರಿಕೆ: 410
ಸಾವು: 79
ಏರಿಕೆ: 03
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.