ಮಂಡ್ಯ: ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ಧಾರೆ. ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ ಜಿಲ್ಲೆಯಲ್ಲಿ 29ಕ್ಕೆ ಏರಿಕೆಯಾಗಿದೆ.
ಮದ್ದೂರು, ಮಂಡ್ಯ, ಮಳವಳ್ಳಿ ತಾಲ್ಲೂಕಿನ ತಲಾ ಒಬ್ಬರು ಮೃತಪಟ್ಟಿದ್ಧಾರೆ. ಅವರನ್ನು ಕೋವಿಡ್ ಕಾರ್ಯಸೂಚಿಯನ್ವಯ ಅಂತ್ಯಕ್ರಿಯೆ ನೆರವೇರಿಸಲಾಯಿತು. ಬುಧವಾರ ಒಂದೇ ದಿನ ಜಿಲ್ಲೆಯಲ್ಲಿ 120 ಮಂದಿಗೆ ಕೋವಿಡ್ ದೃಢಪಟ್ಟಿದ್ದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,886ಕ್ಕೆ ಏರಿಕೆಯಾಗಿದೆ.
ಮಂಡ್ಯ ತಾಲ್ಲೂಕಿನಲ್ಲಿ 50 ಮಂದಿ, ಮದ್ದೂರು 11, ಮಳವಳ್ಳಿ 09, ಪಾಂಡವಪುರ 8, ಶ್ರೀರಂಗಪಟ್ಟಣ 8, ಕೆ.ಆರ್.ಪೇಟೆ 14, ನಾಗಮಂಗಲ 22 ಮಂದಿಯಲ್ಲಿ ಕೋವಿಡ್ ಪತ್ತೆಯಾಗಿದೆ.
ಬುಧವಾರ ಕೋವಿಡ್ನಿಂದ ಗುಣಮುಖರಾದ 135 ಮಂದಿಯನ್ನು ಬಿಡುಗಡೆ ಮಾಡಲಾಯಿತು. ಇಲ್ಲಿಯವರೆಗೂ ಕೋವಿಡ್ನಿಂದ 1523 ಮಂದಿ ಗುಣಮುಖರಾಗಿದ್ಧಾರೆ. 1333 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.