ADVERTISEMENT

ಕೋವಿಡ್‌: ಒಬ್ಬ ಸಾವು, 314 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2020, 2:49 IST
Last Updated 25 ಸೆಪ್ಟೆಂಬರ್ 2020, 2:49 IST

ಮಂಡ್ಯ: ಮದ್ದೂರು ತಾಲ್ಲೂಕಿನ ವ್ಯಕ್ತಿಯೊಬ್ಬರು ಗುರುವಾರ ಕೋವಿಡ್‌ ನಿಂದ ಮೃತಪಟ್ಟಿದ್ದು, ಇಲ್ಲಿಯವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 98 ಕ್ಕೆ ಏರಿಕೆಯಾಗಿದೆ.

ಮದ್ದೂರಿನ 63 ವರ್ಷ ಪುರುಷ ಕೋವಿಡ್‌, ನಿಮೋನಿಯಾ ಹಾಗೂ ಇತರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೆ ಗುರುವಾರ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಗುರುವಾರ ಒಂದೇ ದಿನ 195 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 9,788ಕ್ಕೆ ಏರಿಕೆಯಾಗಿದೆ.

ADVERTISEMENT

ಮಂಡ್ಯ ತಾಲ್ಲೂಕಿನ 56, ಮದ್ದೂರು 39, ಮಳವಳ್ಳಿ 30, ಪಾಂಡವಪುರ 12, ಶ್ರೀರಂಗಪಟ್ಟಣ 08, ಕೆ.ಆರ್‌.‍ಪೇಟೆ 59, ನಾಗಮಂಗಲ ತಾಲ್ಲೂಕಿನ 8 ಮಂದಿಗೆ ಸೋಂಕು ತಗುಲಿದೆ.

ಗುರುವಾರ 314 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಮಂಡ್ಯ ತಾಲ್ಲೂಕಿನ 57, ಮದ್ದೂರು 33, ಮಳವಳ್ಳಿ 26, ಪಾಂಡವಪುರ 32, ಶ್ರೀರಂಗಪಟ್ಟಣ 12, ಕೆ.ಆರ್‌.ಪೇಟೆ 148, ನಾಗಮಂಗಲ 04, ಹೊರ ಜಿಲ್ಲೆಯ ಇಬ್ಬರು ಸೇರಿದಂತೆ ಇಲ್ಲಿಯವರೆಗೆ 8,471 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಜಿಲ್ಲೆಯಲ್ಲಿ 1,219 ಸಕ್ರಿಯ ಪ್ರಕರಣಗಳಿವೆ.

ಸರ್ಕಾರಿ ಆಸ್ಪತ್ರೆಯಲ್ಲಿ 401, ಖಾಸಗಿ ಆಸ್ಪತ್ರೆಯಲ್ಲಿ 90, ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ 71, ಹೋಂ ಐಸೋಲೇಷನ್‌ನಲ್ಲಿ 657 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಧನಂಜಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.