ADVERTISEMENT

ಅನಾರೋಗ್ಯದಿಂದ ಸಿಆರ್‌ಪಿಎಫ್‌ ಯೋಧ ಸಾವು

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2019, 9:09 IST
Last Updated 21 ನವೆಂಬರ್ 2019, 9:09 IST
   

ಮಂಡ್ಯ: ಚೆನ್ನೈನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಆರ್‌ಪಿಎಫ್‌ ಯೋಧ, ತಾಲ್ಲೂಕಿನ ಹನಿಯಂಬಾಡಿ ಗ್ರಾಮದ ದೇವರಾಜು (40) ಅನಾರೋಗ್ಯದಿಂದ ಬುಧವಾರ ಮೃತಪಟ್ಟಿದ್ದಾರೆ.

ಜಾಂಡೀಸ್ ನಿಂದ ಬಳಲುತ್ತಿದ್ದ ದೇವರಾಜ್ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಬುಧವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಮೃತ ಯೋಧನ ಪಾರ್ಥಿವ ಶರೀರವನ್ನು ಗುರುವಾರ ಗ್ರಾಮಕ್ಕೆ ತರಲಾಗಿದ್ದು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT