ಶ್ರೀರಂಗಪಟ್ಟಣ: ಸರಳ ದಸರಾ ಆಚರಣೆ ಅಂಗವಾಗಿ ಕಿರಂಗೂರಿನ ಬನ್ನಿಮಂಟಪದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಲಾಯಿತು.
ಪೂಜೆಯಲ್ಲಿ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಭಾಗಿಯಾಗಿದ್ದರು.
ಸಂಜೆ 6 ಗಂಟೆಗೆ ಶ್ರೀರಂಗಪಟ್ಟಣದ ಬತೇರಿಯಲ್ಲಿ ರಘು ದೀಕ್ಷಿತ್ ಅವರಿಂದ ಸಂಗೀತ ಕಾರ್ಯಕ್ರಮ ಇದೆ. ಸಂಗೀತ ಕಾರ್ಯಕ್ರಮಕ್ಕೆ ಸಾರ್ವಜನಿಕರ ಪ್ರವೇಶ ಇಲ್ಲ. ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಸೇರಿ ಶ್ರೀರಂಗಪಟ್ಟಣದ 10 ಕಡೆ ಎಲ್ಇಡಿ ಪರದೆ ಅಳವಡಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.