ಮೇಲುಕೋಟೆ: ಧಾರ್ಮಿಕ ಕ್ಷೇತ್ರವಾದ ಮೇಲುಕೋಟೆಯ ದಳವಾಯಿ ಕೆರೆಯ ಸಮೀಪದಲ್ಲಿ ಮಂಗಳವಾರ ನವಜಾತ ಹೆಣ್ಣು ಶಿಶುವಿನ ಶವ ದೊರೆತಿದೆ.
ಮಗು ಎರಡು ದಿನದ ಹಿಂದಷ್ಟೇ ಜನಿಸಿದ್ದು, ಹೊಕ್ಕಳ ಬಳ್ಳಿಯನ್ನೂ ಕತ್ತರಿಸಿಲ್ಲ. ಶವವನ್ನು ಕವರ್ ನಲ್ಲಿ ಸುತ್ತಿ ಕೆರೆಯ ಸಮೀಪದ ಪಕ್ಕದಲ್ಲಿ ಬಿಸಾಡಿ ಹೋಗಿದ್ದಾರೆ. ಹೆಣ್ಣೆಂಬ ಕಾರಣಕ್ಕೆ ಎಸೆದಿದ್ದಾರೋ ಇಲ್ಲವೇ ಸತ್ತ ಮಗುವನ್ನು ಅಂತ್ಯಸಂಸ್ಕಾರ ನಡೆಸದೇ ಹಾಗೆಯೇ ಎಸೆದು ಹೋಗಿದ್ದಾರೆಯೋ ಎಂಬ ಬಗ್ಗೆ ತನಿಖೆ ನಡೆದಿದೆ ಎಂದು ಪೊಲೀಸರು ತಿಳಿಸಿದರು.
ಮಗುವಿನ ದೇಹವನ್ನು ಶವ ಪರೀಕ್ಷೆಗಾಗಿ ತಾಲ್ಲೂಕು ಆಸ್ಪತ್ರೆಯಲ್ಲಿನ ಶವಾಗಾರಕ್ಕೆ ರವಾನಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.