ADVERTISEMENT

ಪಾಂಡವಪುರ: ಈಜಲು ಹೋದ ಯುವಕ ನೀರು ಪಾಲು

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2020, 2:42 IST
Last Updated 25 ಸೆಪ್ಟೆಂಬರ್ 2020, 2:42 IST

ಪಾಂಡವಪುರ: ಹೇಮಾವತಿ ನಾಲೆಯಲ್ಲಿ ಈಜಲು ಹೋಗಿದ್ದ ಯುವಕ ಕೊಚ್ಚಿ ಹೋದ ಘಟನೆ ತಾಲ್ಲೂಕಿನ ಮೇಲುಕೋಟೆ ಸಮೀಪದ ಹೊಸಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ಪಾಂಡವಪುರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಕೃಷ್ಣೇಗೌಡ ಅವರ ಪುತ್ರ ಶಶಾಂಕ್ ಗೌಡ (20) ಕೊಚ್ಚಿ ಹೋದ ಯುವಕ.

ಉಳಿಗೆರೆ ಬಳಿಯ ತಮ್ಮ ಜಮೀನಿಗೆ ಹೋಗಿದ್ದ ಸಂದರ್ಭದಲ್ಲಿ ಗೆಳೆಯರ ಜೊತೆ ಹೇಮಾವತಿ ನಾಲೆಯಲ್ಲಿ ಈಜಲು ಹೋದಾಗ ಘಟನೆ ನಡೆದಿದೆ. ಆತನಿಗೆ ಈಜು ಬರುತ್ತಿರಲಿಲ್ಲ ಎನ್ನಲಾಗಿದೆ. ಅಗ್ನಿಶಾಮಕ ದಳದಿಂದ ಶವದ ಹುಡುಕಾಟ ನಡೆಸಿದ್ದಾರೆ.

ADVERTISEMENT

ಮೇಲುಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.