ಶ್ರೀರಂಗಪಟ್ಟಣ: ಸಾಲದ ಹೊರೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಪಾಲಹಳ್ಳಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಗ್ರಾಮದ ದಿವಂಗತ ಮರಿದೇವೇಗೌಡ ಅವರ ಮಗ ಗೋವಿಂದರಾಜು (42) ಮೃತರು.
‘ಗೋವಿಂದರಾಜು ಬ್ಯಾಂಕ್ನಲ್ಲಿ ಪಡೆದಿದ್ದ ಸಾಲ ತೀರಿಸಲು ಜಮೀನು ಮಾರಾಟ ಮಾಡಿದ್ದರು. ಆದರೂ ವಿವಿಧ ಸಂಘ, ಸಂಸ್ಥೆಗಳು ಹಾಗೂ ವ್ಯಕ್ತಿಗಳಿಂದ ಪಡೆದಿದ್ದ ₹3 ಲಕ್ಷಕ್ಕೂ ಹೆಚ್ಚು ಸಾಲ ಉಳಿದಿತ್ತು. ಸಾಲಗಾರರ ಕಿರುಕುಳ ಹೆಚ್ಚಾದ ಕಾರಣ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಗೋವಿಂದರಾಜು ಅವರ ಪತ್ನಿ ನೇತ್ರಾವತಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ಅವರು ಗೋವಿಂದರಾಜು ಅವರ ಶವ ಇರಿಸಿದ್ದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಗೋವಿಂದರಾಜು ಅವರ ಸಂಬಂಧಿಕರಿಂದ ಮಾಹಿತಿ ಪಡೆದರು. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.