ADVERTISEMENT

ಶ್ರೀರಂಗಪಟ್ಟಣ: ಜಿಂಕೆ ಕೊಂಬು, ಆಮೆ ಸಾಗಣೆ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 2:34 IST
Last Updated 21 ಸೆಪ್ಟೆಂಬರ್ 2020, 2:34 IST
ಶ್ರೀರಂಗಪಟ್ಟಣ ತಾಲ್ಲೂಕು ಚನ್ನಹಳ್ಳಿ ಬೋರೆ ಗ್ರಾಮದ ಮಾದಪ್ಪ ಎಂಬಾತನನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ
ಶ್ರೀರಂಗಪಟ್ಟಣ ತಾಲ್ಲೂಕು ಚನ್ನಹಳ್ಳಿ ಬೋರೆ ಗ್ರಾಮದ ಮಾದಪ್ಪ ಎಂಬಾತನನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ   

ಶ್ರೀರಂಗಪಟ್ಟಣ: ಜಿಂಕೆ ಕೊಂಬು ಮತ್ತು ಎರಡು ಜೀವಂತ ಆಮೆಗಳನ್ನು ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ತಾಲ್ಲೂಕಿನ ಚನ್ನಹಳ್ಳಿ ಬೋರೆ ಗ್ರಾಮದ ಮಾದಪ್ಪ (38) ಬಂಧಿತ ವ್ಯಕ್ತಿ. ಮಾದಪ್ಪ ಮೈಸೂರು ಕಡೆ ತೆರಳುತ್ತಿದ್ದ ವೇಳೆ ಬಂಧಿಸಿದ್ದು, ಆತನಿಂದ ಎರಡು ಜಿಂಕೆ ಕೊಂಬುಗಳು ಮತ್ತು ಎರಡು ಆಮೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಖಚಿತ ಮಾಹಿತಿ ಮೇರೆಗೆ ಬಂಧಿಸಿ ವಿಚಾಣೆಗೆ ಒಳಪಡಿಸಿದ ವೇಳೆ ವನ್ಯಜೀವಿ ಬೇಟೆ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿಯನ್ನು ಅರಣ್ಯ ಇಲಾಖೆಯ ವಶಕ್ಕೆ ನೀಡಲಾಗಿದೆ. ಬಂಧಿತನು ಹಲವು ದಿನಗಳಿಂದ ವನ್ಯ ಜೀವಿಗಳನ್ನು ಬೇಟೆಯಾಡುತ್ತಿದ್ದ ಎಂಬ ಸಂಗತಿ ತಿಳಿದು ಬಂದಿದೆ.

ADVERTISEMENT

ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವಲಯ ಅಣ್ಯಾಧಿಕಾರಿ ಸುನೀತಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.