ADVERTISEMENT

ಜಿಂಕೆ ಬೇಟೆ : ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2019, 16:44 IST
Last Updated 14 ಏಪ್ರಿಲ್ 2019, 16:44 IST
   

ಹಲಗೂರು: ಮುತ್ತತ್ತಿ ಅರಣ್ಯ ಪ್ರದೇಶದ ತಿರುಗಣೆಮಡು ಬಳಿ ಕಾವೇರಿ ನದಿ ತೀರದಲ್ಲಿ ನೀರು ಕುಡಿಯಲು ಬಂದಿದ್ದ ಜಿಂಕೆಯನ್ನು ಬೇಟೆಯಾಡಿದ್ದ ಇಬ್ಬರು ಆರೋಪಿಗಳನ್ನು ಭಾನುವಾರ ಅರಣ್ಯಾಧಿಕಾರಿ ಬಂಧಿಸಿದ್ದಾರೆ.

ಮುತ್ತತ್ತಿ ಗ್ರಾಮದ ಬಸವರಾಜು, ಕನಕಪುರ ತಾಲ್ಲೂಕಿನ ಮಡಿವಾಳ ಗ್ರಾಮದ ಮುನಿಶಿವ ಬಂಧಿತರು. ಗಂಡು ಜಿಂಕೆಯನ್ನು ಬೇಟೆಯಾಡಿ ಮಾಂಸ ಕತ್ತರಿಸುವ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿ ಕಿರಣ್‌ಕುಮಾರ್‌ ನೇತೃತ್ವದ ತಂಡ ದಾಳಿ ನಡೆಸಿ ಇಬ್ಬರನ್ನೂ ಸೆರೆ ಹಿಡಿದು, ಜಿಂಕೆ ಕಳೇಬರವನ್ನು ವಶಕ್ಕೆ ಪಡೆಯಿತು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT