ADVERTISEMENT

ಅಸ್ಥಿ ವಿಸರ್ಜನೆಗೆ ಅವಕಾಶ: ಒತ್ತಾಯ

​ಪ್ರಜಾವಾಣಿ ವಾರ್ತೆ
Published 11 ಮೇ 2021, 16:30 IST
Last Updated 11 ಮೇ 2021, 16:30 IST

ಮಂಡ್ಯ: ‘ಶ್ರೀರಂಗಪಟ್ಟಣದ ಕಾವೇರಿ ನದಿ ತಟದಲ್ಲಿ ಮೃತರ ಅಸ್ಥಿ ವಿಸರ್ಜನೆಗೆ ಜಿಲ್ಲಾಡಳಿತ ಅವಕಾಶ ನೀಡಬೇಕು’ ಎಂದು ವಿಶ್ವ ಹಿಂದೂ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ವಿ.ಭಾನುಪ್ರಕಾಶ್‌ ಶರ್ಮಾ ಒತ್ತಾಯಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಬೆಂಗಳೂರು– ಮೈಸೂರು ಸೇರಿದಂತೆ ವಿವಿಧೆಡೆಗಳಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಅಸ್ಥಿಯನ್ನು ಮನೆಯಲ್ಲೇ ಇಟ್ಟುಕೊಂಡಿ ದ್ದು, ವಿಸರ್ಜಿಸಲಾಗದೆ ಮಾನಸಿಕ ತೊಳಲಾಟಕ್ಕೆ ಸಿಲುಕಿದ್ದಾರೆ. ಕೊರೊನಾ ದಿಂದ ಮೃತಪಟ್ಟಿರುವ ನೋವು ಒಂದಡೆ ಯಾದರೆ ಸರಿಯಾದ ಸಮಯಕ್ಕೆ ಅಸ್ಥಿ ಬಿಡಲಿಲ್ಲ ಎಂಬ ಕೊರಗು ಮನೆಯ ವರಲ್ಲಿ ಮನೆ ಮಾಡಿದೆ. ಅಸ್ಥಿ ಬಿಡಲು ನಿಯಮಾನುಸಾರ ಅವಕಾಶ ಕಲ್ಪಿಸಿದರೆ ಮೃತಪಟ್ಟವರ ಕುಟುಂಬಗಳಿಗೆ ಮಾನಸಿಕ ನೆಮ್ಮದಿ ಸಿಗುತ್ತದೆ’ ಎಂದರು.

‘ಅಸ್ಥಿ ಬಿಡುವುದರಿಂದ ನದಿ ಮಲಿನ ವಾಗುತ್ತದೆ ಎಂದು ಆರೋಪಿಸುತ್ತಾರೆ. ಆದರೆ ಸುತ್ತಮುತ್ತಲ ಕಾರ್ಖಾನೆಗಳ ಕೊಳಚೆ ನೀರನ್ನು ನದಿಗೆ ಬಿಡುತ್ತಿದ್ದಾರೆ. ಈಗ ಅದು ಕಡಿಮೆಯಾಗಿದೆ. ಅಸ್ಥಿ ವಿಸರ್ಜನೆಯಿಂದ ನದಿ ಮಲಿನವಾ ಗುವುದಿಲ್ಲ. ಹಿಂದೂಗಳ ಧಾರ್ಮಿಕ ನಂಬಿಕೆಗೆ ಯಾವುದೇ ಅಡೆತಡೆಯಾ ಗದಂತೆ ಅಸ್ಥಿ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಬೇಕು’ ಎಂದರು.

ADVERTISEMENT

‘ಶ್ರೀರಂಗಪಟ್ಟಣದ ಪಶ್ಚಿಮ ವಾಹಿಸಿ, ಗೋಸಾಯಿ ಘಾಟ್‌, ಗಂಜಾಂನ ಸಂಗಮದಲ್ಲಿ ಹಿಂದಿನಿಂದಲೂ ಧಾರ್ಮಿಕ ವಿಧಿ ವಿಧಾನದೊಂದಿಗೆ ಅಸ್ಥಿ ವಿಸರ್ಜನೆ ಕಾರ್ಯವನ್ನು ಮಾಡಿಕೊಂಡು ಬರಲಾಗುತ್ತಿದೆ. ಮಹಾತ್ಮ ಗಾಂಧಿ, ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಸೇರಿದಂತೆ ಅನೇಕ ಗಣ್ಯರ ಅಸ್ಥಿ ವಿಸರ್ಜಿಸಲಾಗಿದೆ. ಆದರೆ, ಕೊರೊನಾ ಕಾರಣದಿಂದ ಅಸ್ಥಿ ವಿಸರ್ಜಿ ಸುವುದನ್ನು ತಡೆಯಲು ಪೊಲೀಸರನ್ನು ನಿಯೋಜಿಸಲಾಗಿದೆ’ ಎಂದರು.

ನಂತರ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಘಟಕದ ಕಾರ್ಯದರ್ಶಿ ಬಾಲು ಚಿಕ್ಕಬಳ್ಳಿ, ಪದಾಧಿಕಾರಿಗಳಾದ ಪುನೀತ್‌, ಚೇತನ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.