ADVERTISEMENT

ಗೃಹಸಚಿವರ ಬಂಧನಕ್ಕೆ ಡಿ.ಕೆ.ಶಿವಕುಮಾರ್ ಒತ್ತಾಯ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2022, 21:13 IST
Last Updated 6 ಏಪ್ರಿಲ್ 2022, 21:13 IST
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್    

ಕೆ.ಆರ್‌.ಪೇಟೆ (ಮಂಡ್ಯ ಜಿಲ್ಲೆ): ‘ಧರ್ಮಗಳ ನಡುವೆ ಸಂಘರ್ಷ ಭಾವನೆ ಮೂಡಿಸಿ, ಅಶಾಂತಿ ಸೃಷ್ಟಿಗೆ ಕಾರಣವಾಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಕೂಡಲೇ ಬಂಧಿಸಿ ಕ್ರಮ ಜರುಗಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಬುಧವಾರ ಒತ್ತಾಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಪಘಾತದ ನಂತರದ ಜಗಳದ ವೇಳೆ ಚಂದ್ರು ಕೊಲೆಯಾಗಿದ್ದರೂ, ಉರ್ದು ಭಾಷೆ ಬರುವುದಿಲ್ಲವೆಂಬ ಕಾರಣಕ್ಕೆ ದಲಿತ ಯುವಕನ ಕೊಲೆಯಾಗಿದೆ ಎಂದು ತಪ್ಪು ಮಾಹಿತಿ ನೀಡಿದ್ದಾರೆ. ಆದರೆ ಸಮಾಜಕ್ಕೆ ಸತ್ಯ ತಿಳಿಸಿರುವ ಪೊಲೀಸರು ಅಭಿನಂದನೆಗೆ ಅರ್ಹರು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT