ನಾಗಮಂಗಲ: ಬೀರನಹಳ್ಳಿ ಗ್ರಾಮದಲ್ಲಿ ಕೆರೆಗೆ ಬಟ್ಟೆ ತೊಳೆಯಲು ಹೋದ ತಾಯಿ ಹಾಗೂ ಇಬ್ಬರು ಮಕ್ಕಳು ನೀರುಪಾಲಾಗಿದ್ದಾರೆ.
ತಾಲ್ಲೂಕಿನ ಬೋಗಾದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರನಹಳ್ಳಿ ಗ್ರಾಮದ ಗೀತಾ ನರಸಿಂಹಯ್ಯ (38) ಮಕ್ಕಳಾದ ಸವಿತಾ (19) ಮತ್ತು ಸೌಮ್ಯಾ(14) ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ.
ಕೆರೆಯಲ್ಲಿ ಬಿಂದಿಗೆ ತೇಲುತ್ತಿರುವುದನ್ನು ಹಾಗೂದಡದಲ್ಲಿ ಬಟ್ಟೆಗಳು ಬಿದ್ದಿರುವುದನ್ನು ಗಮನಿಸಿ ಶಂಕೆಗೊಂಡು ಗ್ರಾಮಸ್ಥರು ಕೆರೆಯಲ್ಲಿ ಹುಡುಕಾಡಿದಾಗ ಮೃತದೇಹಗಳು ಸಿಕ್ಕಿವೆ. ಮೊದಲು ಒಬ್ಬರು ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದು ಉಳಿದವರು ಅವರನ್ನು ರಕ್ಷಿಸಲು ಹೋಗಿ ನೀರಿನಲ್ಲಿ ಮುಳುಗಿರಬಹುದು ಎಂದು ಅಂದಾಜಿಸಲಾಗಿದೆ.
ನಾಗಮಂಗಲ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.