ADVERTISEMENT

ನದಿಯಲ್ಲಿ ಮುಳುಗಿದ್ದ ರೈತನ ಶವ ಪತ್ತೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2020, 9:32 IST
Last Updated 4 ಮಾರ್ಚ್ 2020, 9:32 IST

ಶ್ರೀರಂಗಪಟ್ಟಣ: ಲೋಕಪಾವನಿ ನದಿಯಲ್ಲಿ ಕೊಚ್ಚಿ ಹೋಗಿದ್ದ, ತಾಲ್ಲೂಕಿನ ಬಾಬು ರಾಯನಕೊಪ್ಪಲು ಗ್ರಾಮದ ರೈತ ಸೋಮೇಶ್ವರ (20) ಶವ ಮಂಗಳವಾರ ಮಧ್ಯಾಹ್ನ ಪತ್ತೆಯಾಗಿದೆ.

ತುಸು ಆಳವಿದ್ದ ಸ್ಥಳದಲ್ಲಿ ಸಿಲುಕಿಕೊಂಡಿದ್ದ ಶವವನ್ನು ಈಜುಗಾರರು, ಅಗ್ನಿಶಾಮಕ ಸಿಬ್ಬಂದಿ ಮೇಲೆ ಎತ್ತಿದರು. ತಹಶೀಲ್ದಾರ್‌ ಸ್ಥಳದಲ್ಲಿದ್ದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವದ ಪಂಚನಾಮೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಯಿತು. ಆಸ್ಪತ್ರೆಯ ಆವರಣದಲ್ಲಿ ಸುತ್ತಮುತ್ತಲ ಗ್ರಾಮಗಳ ನೂರಾರು ಮಂದಿ ಸೇರಿದ್ದರು.

ADVERTISEMENT

ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳಿಗ್ಗೆ ಸುರಿದ ಅಕಾಲಿಕ ಮಳೆಯಿಂದಾಗಿ ಲೋಕಪಾವನಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿತ್ತು. ಎತ್ತುಗಳು ಮತ್ತು ಗಾಡಿಯನ್ನು ತೊಳೆಯಲು ನದಿಗಿಳಿದಿದ್ದ ಇಬ್ಬರ ಪೈಕಿ ಸೋಮೇಶ್ವರ ಕೊಚ್ಚಿ ಹೋಗಿದ್ದರು. ಅವರ ಜತೆಯಲ್ಲಿದ್ದ ಶಿವು ಅಪಾಯದಿಂದ ಪಾರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.