ADVERTISEMENT

ಭ್ರೂಣಹತ್ಯೆ: ಮಂಡ್ಯ ಜಿಲ್ಲೆಯಲ್ಲಿನ ಸ್ಕ್ಯಾನಿಂಗ್ ಕೇಂದ್ರಗಳ ತಪಾಸಣೆ

ಕೆ.ಆರ್ ಪೇಟೆ ಸ್ಕ್ಯಾನಿಂಗ್ ಕೇಂದ್ರಕ್ಕೆ ಬೀಗ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2023, 11:47 IST
Last Updated 5 ಡಿಸೆಂಬರ್ 2023, 11:47 IST
<div class="paragraphs"><p>ಉಪ ವಿಭಾಗಾಧಿಕಾರಿ ನಂದೀಶ್ ಹಾಗೂ ಜಿಲ್ಲಾ‌ ಕುಟುಂಬ ಕಲ್ಯಾಣ ಅಧಿಕಾರಿ ಡಾ. ವೆಂಕಟಸ್ವಾಮಿ ನೇತೃತ್ವದ ತಂಡವು ಮಂಗಳವಾರ <strong>ಕೆ.ಆರ್.‌ಪೇಟೆ</strong> ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ತಪಾಸಣೆ ನಡೆಸಿತು.</p></div>

ಉಪ ವಿಭಾಗಾಧಿಕಾರಿ ನಂದೀಶ್ ಹಾಗೂ ಜಿಲ್ಲಾ‌ ಕುಟುಂಬ ಕಲ್ಯಾಣ ಅಧಿಕಾರಿ ಡಾ. ವೆಂಕಟಸ್ವಾಮಿ ನೇತೃತ್ವದ ತಂಡವು ಮಂಗಳವಾರ ಕೆ.ಆರ್.‌ಪೇಟೆ ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ತಪಾಸಣೆ ನಡೆಸಿತು.

   

ಕೆ.ಆರ್.‌ಪೇಟೆ (ಮಂಡ್ಯ): ಭ್ರೂಣಹತ್ಯೆ ಜಾಲ‌ ಪತ್ತೆಯಾದ ಬೆನ್ನಲ್ಲೇ ಮಂಡ್ಯ ಜಿಲ್ಲೆಯಲ್ಲಿನ ಸ್ಕ್ಯಾನಿಂಗ್ ಕೇಂದ್ರಗಳ ತಪಾಸಣೆಗೆ ಅಧಿಕಾರಿಗಳು ಮುಂದಾಗಿದ್ದು, ನಿಯಮ ಪಾಲನೆ ಮಾಡದ ಆರೋಪದ ಮೇಲೆ ಕೆ.ಆರ್. ಪೇಟೆಯಲ್ಲಿನ ಹೊಸಹೊಳಲು ರಸ್ತೆಯಲ್ಲಿರುವ ನಾವಿ ಸ್ಕ್ಯಾನಿಂಗ್ ಕೇಂದ್ರಕ್ಕೆ ಬೀಗ ಜಡಿದಿದ್ದಾರೆ.

ಉಪ ವಿಭಾಗಾಧಿಕಾರಿ ನಂದೀಶ್ ಹಾಗೂ ಜಿಲ್ಲಾ‌ ಕುಟುಂಬ ಕಲ್ಯಾಣ ಅಧಿಕಾರಿ ಡಾ. ವೆಂಕಟಸ್ವಾಮಿ ನೇತೃತ್ವದ ತಂಡವು ಮಂಗಳವಾರ ಕೆ.ಆರ್.‌ಪೇಟೆ ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ತಪಾಸಣೆ ನಡೆಸಿತು.

ADVERTISEMENT

'ತಜ್ಞ ವೈದ್ಯರಿಲ್ಲದೇ ತಪಾಸಣೆ ನಡೆಸಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಪರಿಶೀಲನೆ ಕೈಗೊಂಡೆವು. ಈ ಸಂದರ್ಭ ನಾವಿ ಕೇಂದ್ರದಲ್ಲಿ ಸರಿಯಾಗಿ ದಾಖಲೆಗಳನ್ನು ನಿರ್ವಹಣೆ ಮಾಡದೇ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದ್ದು, ಕೇಂದ್ರಕ್ಕೆ ಬೀಗ ಹಾಕಲಾಯಿತು' ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.