ADVERTISEMENT

ಸಾಲ ಬಾಧೆ: ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2022, 14:37 IST
Last Updated 3 ಮಾರ್ಚ್ 2022, 14:37 IST
ಪ್ರಸನ್ನ
ಪ್ರಸನ್ನ   

ಬಸರಾಳು: ಸಾಲದ ಬಾಧೆ ತಾಳಲಾಗದೇ ಬಸರಾಳು ಹೋಬಳಿ ವ್ಯಾಪ್ತಿಯ ದೊಡ್ಡಗರುಡನಹಳ್ಳಿ ಗ್ರಾಮದ ರೈತ ಜಿ.ಆರ್.ಪ್ರಸನ್ನ (40) ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಖಾಸಗಿ ಬ್ಯಾಂಕ್, ಸರ್ಕಾರಿ ಬ್ಯಾಂಕ್ ಗಳು, ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಸಂಘಗಳಿಂದ ಅವರು ಸಾಲ ಪಡೆದಿದ್ದರು. ಜೊತೆಗೆ ಕೈಸಾಲವನ್ನೂ ಮಾಡಿಕೊಂಡಿದ್ದರು. ಸಾಲದ ಮೊತ್ತ ₹ 15 ಲಕ್ಷಕ್ಕೂ ಹೆಚ್ಚಾಗಿತ್ತು. ಸಾಲ ಮರುಪಾವತಿ ಮಾಡುವಂತೆ ಒತ್ತಡ ಹೆಚ್ಚಾಗಿತ್ತು.

ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ಗುರುವಾರ ಬೆಳಿಗ್ಗೆ ತಮ್ಮ ಜಮೀನಿನಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಪ್ರಸನ್ನ ಪುತ್ರಿ ಶ್ರುತಿ ಬಸರಾಳು ಠಾಣೆಗೆ ದೂರು ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.