ಮಂಡ್ಯ: ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಶುಕ್ರವಾರ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 86ಕ್ಕೆ ಏರಿಕೆಯಾಗಿದೆ.
ಮಂಡ್ಯ ತಾಲ್ಲೂಕಿನ 48 ವರ್ಷದ ಮಹಿಳೆ, ಮದ್ದೂರು ತಾಲ್ಲೂಕಿನ 73 ವರ್ಷದ ವ್ಯಕ್ತಿ, ಮಳವಳ್ಳಿ ತಾಲ್ಲೂಕಿನ 65 ವರ್ಷದ ವ್ಯಕ್ತಿ, 53 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ವಿವಿಧ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಇವರಿಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದ ಇವರು ಮೃತಪಟ್ಟಿದ್ಧಾರೆ. ಕೋವಿಡ್ ಕಾರ್ಯಸೂಚಿ ಅನ್ವಯ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಶುಕ್ರವಾರ ಒಂದೇ ದಿನ 131 ಮಂದಿಯಲ್ಲಿ ಕೋವಿಡ್–19 ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,640ಕ್ಕೆ ಹೆಚ್ಚಾಗಿದೆ. ಮಂಡ್ಯ ತಾಲ್ಲೂಕಿನ 52 ಮಂದಿ, ಶ್ರೀರಂಗಪಟ್ಟಣ 17, ನಾಗಮಂಗಲ 16, ಕೆ.ಆರ್.ಪೇಟೆ 15, ಮಳವಳ್ಳಿ 14, ಪಾಂಡವಪುರ 9, ಮದ್ದೂರು ತಾಲ್ಲೂಕಿನ 7 ಮಂದಿಯಲ್ಲಿ ಕೋವಿಡ್ ಪತ್ತೆಯಾಗಿದೆ.
ಕೋವಿಡ್ನಿಂದ ಗುಣಮುಖರಾದ 105 ಮಂದಿಯನ್ನು ಶುಕ್ರವಾರ ಬಿಡುಗಡೆ ಮಾಡಲಾಯಿತು. ಮಂಡ್ಯ ತಾಲ್ಲೂಕಿನ 30, ನಾಗಮಂಗಲ 29, ಶ್ರೀರಂಗಪಟ್ಟಣ 21, ಪಾಂಡವಪುರ 17, ಮದ್ದೂರು 7, ಕೆ.ಅರ್.ಪೇಟೆ 3, ಮಳವಳ್ಳಿ ತಾಲ್ಲೂಕಿನ ಇಬ್ಬರನ್ನು ಮನೆಗೆ ಕಳುಹಿಸಲಾಗಿದೆ. ಒಟ್ಟು ರೋಗಿಗಳಲ್ಲಿ ಇಲ್ಲಿಯವರೆಗೆ 5,549 ಮಂದಿ ಗುಣಮುಖರಾಗಿದ್ದಾರೆ. 2,004 ಪ್ರಕರಣಗಳು ಸಕ್ರಿಯವಾಗಿವೆ.
ಕೋವಿಡ್ ಅಂಕಿ–ಅಂಶ
ಜಿಲ್ಲೆಯಲ್ಲಿ ಒಟ್ಟು: 7,640
ಸಕ್ರಿಯ ಪ್ರಕರಣ: 2,004
ಏರಿಕೆ: 131
ಗುಣಮುಖ: 5,549
ಏರಿಕೆ: 105
ಸಾವು: 86
ಏರಿಕೆ: 04
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.