ADVERTISEMENT

ಈಜಲು ಹೋಗಿ ನಾಲ್ವರು ನೀರುಪಾಲು

​ಪ್ರಜಾವಾಣಿ ವಾರ್ತೆ
Published 12 ಮೇ 2019, 20:05 IST
Last Updated 12 ಮೇ 2019, 20:05 IST
ಮಹದೇವು ಮತ್ತು ಶಿವು
ಮಹದೇವು ಮತ್ತು ಶಿವು   

ಮೈಸೂರು: ಪ್ರತ್ಯೇಕ ಪ್ರಕರಣದಲ್ಲಿ ಭಾನುವಾರ ಮೈಸೂರಿನ ಇಬ್ಬರು ಯುವಕರು ಸೇರಿದಂತೆ ನಾಲ್ವರು ನೀರು ಪಾಲಾಗಿದ್ದಾರೆ.

ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳ ಗೊಳ ಸಮೀಪದ ಬಲಮುರಿ ಬಳಿ ಈಜಲು ಕಾವೇರಿ ನದಿಗೆ ಇಳಿದ ಇಬ್ಬರು ಸುಳಿಗೆ ಸಿಕ್ಕಿ ಮೃತಪಟ್ಟಿದ್ದಾರೆ. ಮೈಸೂರಿನ ಗಾಂಧಿನಗರದ ಬಸವರಾಜು ಪುತ್ರ ಶಿವು (21) ಮತ್ತು ಸಿದ್ದರಾಜು ಅವರ ಪುತ್ರ ಅಜಿತ್ ಮಹದೇವು (21) ಮೃತರು.

6 ಯುವಕರ ತಂಡ ಬಲಮುರಿಗೆ ವಿಹಾರಕ್ಕೆ ಬಂದಿತ್ತು. ಮುಳುಗುತ್ತಿದ್ದ ಶಿವು ಅವರನ್ನು ಸ್ನೇಹಿತರು ರಕ್ಷಿಸಿ ದಡಕ್ಕೆ ತಂದಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಕೆ.ಆರ್. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅಸುನೀಗಿದ್ದಾರೆ. ಅಜಿತ್‌ ಅವರು ನದಿಯ ಆಳದಲ್ಲಿ ಸಿಲುಕಿದ್ದರಿಂದ ರಕ್ಷಿಸಲು ಸಾಧ್ಯವಾಗಿಲ್ಲ. ಪೊಲೀಸರು ನುರಿತ ಈಜುಗಾರರನ್ನು ಕರೆಸಿ ಶವಕ್ಕೆ ಶೋಧ ನಡೆಸಿದರು. ಸಂಜೆ 6.45ರ ವೇಳೆಗೆ ಶವವನ್ನು ನದಿಯಿಂದ ಮೇಲೆ ಎತ್ತಲಾಯಿತು.

ADVERTISEMENT

ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಕಂಬಿಬಾಣೆಯ ಚಿಕ್ಲಿಹೊಳೆ ಜಲಾಶಯದಲ್ಲಿ ಈಜಲು ತೆರಳಿದ್ದ ಕೊಡಗರಹಳ್ಳಿ ಸ್ಕೂಲ್‌ ಬಾಣೆ ನಿವಾಸಿ ಸಹದೇವ ಅವರ ಪುತ್ರ ಪವನ್ (19), ಕಂಬಿಬಾಣೆ ಮುನೀಶ್ವರ ದೇವಾಲಯದ ಸಮೀಪದ ನಿವಾಸಿ ಸುಬ್ರಮಣಿ ಅವರ ಪುತ್ರ ನಂದೀಶ್ (16) ಮೃಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.