ಹಲಗೂರು (ಮಂಡ್ಯ): ಮಡಹಳ್ಳಿ ದೊಡ್ಡಿ ಸಮೀಪದ ಇಗ್ಗಲೂರು ಕಾಲುವೆಯಲ್ಲಿ, ಮಂಗಳವಾರ ಬೆಳಿಗ್ಗೆ ಕರಡಿಯೊಂದರ ಕಳೇಬರ ಪತ್ತೆಯಾಗಿದೆ.
‘ಸುಮಾರು ಹದಿನೈದು ವರ್ಷ ವಯಸ್ಸಿನ ಕರಡಿಯು ಬಸವನಬೆಟ್ಟ ಅರಣ್ಯ ಪ್ರದೇಶದಿಂದ ಜನವಸತಿ ಪ್ರದೇಶದ ಕಡೆಗೆ ಆಹಾರ ಹುಡುಕಿಕೊಂಡು ಬಂದಿದ್ದು, ವಯೋಸಹಜ ಕಾರಣದಿಂದ ಮೃತಪಟ್ಟಿದೆ’ ಎಂದು ಉಪ ವಲಯ ಅರಣ್ಯಾಧಿಕಾರಿ ಶಿವರಾಜು ತಿಳಿಸಿದರು.
ಮರಣೋತ್ತರ ಪರೀಕ್ಷೆ ನಂತರ, ಅಂತ್ಯಕ್ರಿಯೆ ನೆರವೇರಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.