ADVERTISEMENT

ಮತ್ತೆ ಒಡೆದ ಹಳೇಬೂದನೂರು ಕೆರೆ: ವಾಹನ ಸಂಚಾರ ಅಸ್ತವ್ಯಸ್ತ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2022, 8:25 IST
Last Updated 15 ಅಕ್ಟೋಬರ್ 2022, 8:25 IST
   

ಮಂಡ್ಯ:ಭಾರಿ‌ಮಳೆಯಿಂದ ಒಂದೂವರೆ ತಿಂಗಳ ಹಿಂದಷ್ಟೇ ಒಡೆದಿದ್ದ ತಾಲ್ಲೂಕಿನ ಹಳೇಬೂದನೂರು ಕೆರೆ ಮತ್ತೆ ಒಡೆದಿದೆ. ಶುಕ್ರವಾರ ರಾತ್ರಿ ಸುರಿದ ಮಳೆಗೆ ಕೆರೆ ಏರಿ ಮೊದಲು ಒಡೆದಿದ್ದ ಸ್ಥಳದಲ್ಲೇ ಒಡೆದಿದ್ದು ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ನೀರು ನುಗ್ಗಿದೆ.

ಮಂಡ್ಯದಿಂದ ಬೆಂಗಳೂರಿಗೆ ತೆರಳುವ ಮಾರ್ಗ ಸಂಪೂರ್ಣವಾಗಿ ಮುಳುಗಿದೆ. ನಿರ್ಮಾಣ ಹಂತದಲ್ಲಿರುವ ಸೇತುವೆಯೇ ಕೆರೆ ಏರಿಯಂತಾಗಿದೆ. ಇನ್ನೊಂದು ಮಾರ್ಗದಲ್ಲಿ ಎರಡೂ ಕಡೆಯ ವಾಹನಗಳು ಸಂಚರಿಸುತ್ತಿವೆ. ವಾಹನ ದಟ್ಟಣೆ ಹೆಚ್ಚಾಗಿದ್ದು ಟ್ರಾಫಿಕ್ ಜಾಮ್ ಉಂಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT