ಮಳವಳ್ಳಿ(ಮಂಡ್ಯ): ‘ಸ್ವಾತಂತ್ರ್ಯ ಬಂದ ಬಳಿಕ 60 ವರ್ಷ ರಾಜ್ಯ ಆಳಿದ ಕಾಂಗ್ರೆಸ್ ಮುಖಂಡರಿಗೆ ದಲಿತರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ವಿಚಾರ ಗೊತ್ತಿರಲಿಲ್ಲವೇ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಪ್ರಶ್ನಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ದಲಿತರು ಮುಖ್ಯಮಂತ್ರಿಯಾಗುವುದನ್ನು ನಾವು ತಪ್ಪಿಸಿಲ್ಲ. ಅವಕಾಶ ತಪ್ಪಿಸಿದ್ದವರೇ ಈಗ ಮತ್ತೆ ಸಿ.ಎಂ ಆಗಬೇಕು ಎಂದು ಹೇಳಿಕೊಳ್ಳುತ್ತಿದ್ದಾರೆ. ತಾನಿದ್ದರೆ ಮಾತ್ರ ಕಾಂಗ್ರೆಸ್ ಎಂದೂ ಹೇಳಿಕೊಳ್ಳುತ್ತಾರೆ. 130 ಸೀಟ್ನಿಂದ 78ಕ್ಕೆ ಇಳಿಸಿದರಲ್ಲ ಅವರೇ ದಲಿತರಿಗೆ ಸಿ.ಎಂ ಆಗುವ ಅವಕಾಶ ತಪ್ಪಿಸಿದ್ದಾರೆ’ ಎಂದು ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ... ಮತ್ತೆ ದೇವೇಂದ್ರ ಫಡಣವಿಸ್ ಭೇಟಿ ಮಾಡಿದ ಶಾಸಕ ರಮೇಶ್ ಜಾರಕಿಹೊಳಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.