ADVERTISEMENT

ಧಾರಾಕಾರ ಮಳೆ; ಕಾಂಪೌಂಡ್ ಕುಸಿತ

ನಾಗಮಂಗಲ; ಬಸ್ ನಿಲ್ದಾಣ, ಮನೆ, ಅಂಗಡಿ ಮಳಿಗೆಗಳಿಗೆ ನುಗ್ಗಿದ ನೀರು; ಜನರ ಪರದಾಟ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2021, 2:02 IST
Last Updated 11 ಅಕ್ಟೋಬರ್ 2021, 2:02 IST
ನಾಗಮಂಗಲ ಪಟ್ಟಣದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಭಾನುವಾರ ಸುರಿದ ಭಾರಿ ಮಳೆಗೆ ನೀರು ತುಂಬಿರುವುದು
ನಾಗಮಂಗಲ ಪಟ್ಟಣದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಭಾನುವಾರ ಸುರಿದ ಭಾರಿ ಮಳೆಗೆ ನೀರು ತುಂಬಿರುವುದು   

ನಾಗಮಂಗಲ: ತಾಲ್ಲೂಕಿನಾದ್ಯಂತ ಭಾನುವಾರ ಮಧ್ಯಾಹ್ನದ ಬಳಿಕ ಪ್ರಾರಂಭವಾದ ಧಾರಾಕಾರ ಮಳೆ, ಗಾಳಿಗೆ ಸೆಸ್ಕ್ ಕಚೇರಿಯ ಕಾಂಪೌಡ್ ಕುಸಿದಿದೆ. ಅಂಗಡಿ ಮುಂಗಟ್ಟುಗಳಿಗೆ ಮಳೆ ನೀರು ನುಗ್ಗಿದೆ.

ಸುಮಾರು ಎರಡು ಗಂಟೆ ಸುರಿದ ಧಾರಾಕಾರ ಮಳೆಗೆ ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಉಗ್ರಾಣದ ಕಾಂಪೌಂಡ್ ಕುಸಿದು ಬಿದ್ದಿದೆ.

ಸ್ಥಳಕ್ಕೆ ಸೆಸ್ಕ್ ಎಂಜಿನಿಯರ್ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ADVERTISEMENT

ಪಟ್ಟಣದ ಮೈಲಾರಾ ಪಟ್ಟಣದ ರಸ್ತೆಯಲ್ಲಿ ಭಾರಿ ಪ್ರಮಾಣದ
ನೀರು ಹರಿದು ವಾಹನ ಸಂಚಾರಕ್ಕೆ
ತಡೆ ಉಂಟಾಗಿತ್ತು.

ಪಟ್ಟಣದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನೀರು ಸಂಗ್ರಹವಾಗಿ ಕೆರೆಯಂತಾಗಿ ಪ್ರಯಾಣಿಕರ ಓಡಾಟಕ್ಕೆ ತೊಂದರೆಯಾಯಿತು. ನಿರಂತರವಾಗಿ ಸುರಿದ ಮಳೆಯಿಂದ ಪಟ್ಟಣದ ವ್ಯಾಪ್ತಿಯ ಹಲವು ಅಂಗಡಿ ಮಳಿಗೆಗಳಿಗೂ ನೀರು
ನುಗ್ಗಿ ಅಂಗಡಿ ಮಾಲೀಕರು ಪರದಾಡುವಂತಾಯಿತು.

ತಾಲ್ಲೂಕಿನ ಹೊಣಕೆರೆ, ಬೆಳ್ಳೂರು, ದೇವಾಲಾಪುರ, ಬಿಂಡಿಗನವಿಲೆ ಹೋಬಳಿ ವ್ಯಾಪ್ತಿಯಲ್ಲೂ ಮಳೆಯಾ ಗಿದ್ದು, ರಾಗಿ ಬಿತ್ತನೆ ಮಾಡಿ ಬೆಳೆ ಒಣ ಗುವ ಭೀತಿಯಲ್ಲಿದ್ದ ರೈತರಿಗೆ ಉತ್ತಮ ಮಳೆಯಿಂದ ನೆಮ್ಮದಿ ಉಂಟಾಗಿದೆ.

ಪಟ್ಟಣದ ವ್ಯಾಪ್ತಿಯಲ್ಲಿ
ಕೆಲಗಂಟೆ ಕಾಲ ವಿದ್ಯುತ್
ಸ್ಥಗಿತವಾಗಿತ್ತು. ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಸಂಜೆಯ ನಂತರವೂ ಮಳೆ ಮುಂದುವರಿದ ಕಾರಣ
ವಿದ್ಯುತ್ ಸ್ಥಗಿತವಾಗಿತ್ತು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.