ADVERTISEMENT

ಆತ್ಮಾನಂದ ಮನೆಗೆ ಐಟಿ ದಾಳಿ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2019, 18:28 IST
Last Updated 3 ಏಪ್ರಿಲ್ 2019, 18:28 IST

ಮಂಡ್ಯ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್‌.ಆತ್ಮಾನಂದ ಅವರ ಮನೆ ಮೇಲೆ ದಾಳಿ ನಡೆಸಿದರು.

ಎರಡು ಕಾರುಗಳಲ್ಲಿ ಬಂದ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದರು. ರಾತ್ರಿವರೆಗೂ ಶೋಧ ಕಾರ್ಯ ಮುಂದುವರೆದಿತ್ತು. ದಾಳಿ ವಿವರಗಳು ಲಭ್ಯವಾಗಿಲ್ಲ. ಇಲ್ಲಿಯವರೆಗೆ ಮಂಡ್ಯ–ಮೈಸೂರಿನಲ್ಲಿ ಐವರು ಮುಖಂಡರು, ಗುತ್ತಿಗೆದಾರರ ಮನೆಗಳ ಮೇಲೆ ದಾಳಿ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT