ಕೆ.ಆರ್ ಪೇಟೆ:‘ಕನ್ನಡಪ್ರಭ’ ದೈನಿಕದತಾಲ್ಲೂಕು ವರದಿಗಾರ, ಪತ್ರಿಕಾ ಏಜೆಂಟ್, ಕೆ.ಆರ್.ಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಿಂ.ಕಾ.ಸುರೇಶ್ (60) ಶನಿವಾರ ಕೋವಿಡ್ನಿಂದಾಗಿ ಕೊನೆಯುಸಿರೆಳೆದರು.
10 ದಿನಗಳ ಹಿಂದೆ ಅವರಿಗೆ ಕೋವಿಡ್-19 ಇರುವುದು ದೃಢಪಟ್ಟಿತ್ತು. ತೀವ್ರ ಉಸಿರಾಟದ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಶನಿವಾರಮೃತಪಟ್ಟಿದ್ದಾರೆ.
ಅವರಿಗೆ ಪತ್ನಿ, ಪುತ್ರ ಇದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.