ADVERTISEMENT

ಮಂಡ್ಯ: ಕಸಾಪ‌ ಜಿಲ್ಲಾಧ್ಯಕ್ಷ ರವಿಕುಮಾರ್ ಚಾಮಲಾಪುರ ನಿಧನ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2024, 4:36 IST
Last Updated 4 ಮಾರ್ಚ್ 2024, 4:36 IST
   

ಮಂಡ್ಯ: ಕಸಾಪ‌ ಜಿಲ್ಲಾ ಘಟಕದ ಅಧ್ಯಕ್ಷ, ಕನ್ನಡ ಉಪನ್ಯಾಸಕ ರವಿಕುಮಾರ್ ಚಾಮಲಾಪುರ (52) ಸೋಮವಾರ ಹೃದಯಾಘಾತದಿಂದ ನಿಧನರಾದರು.

ಅವರು 2ನೇ ಬಾರಿಗೆ ಜಿಲ್ಲಾ ಕಸಾಪ‌ ಅಧ್ಯಕ್ಷರಾಗಿದ್ದರು. ಜಿಲ್ಲೆಗೆ ಅಖಿಲ ಭಾರತ ಕನ್ನಡ ಸಾಹಿತ್ಯ‌ ಸಮ್ಮೇಳನ ತರುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಸಮ್ಮೇಳನ ನಡೆಯುವ ಮೊದಲೇ ಅವರು ಇಹಲೋಕ ತ್ಯಜಿಸಿದ್ದಾರೆ.

ಜಿಲ್ಲಾ, ತಾಲ್ಲೂಕು ಸಾಹಿತ್ಯ ಸಮ್ಮೇಳನಗಳನ್ನು ಅದ್ಧೂರಿಯಾಗಿ ಆಚರಣೆ ಮಾಡಿ‌ ಹೆಸರುವಾಸಿಯಾಗಿದ್ದರು. ಹೋಬಳಿ ಮಟ್ಟದಲ್ಲೂ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಿದ್ದರು.

ADVERTISEMENT

ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್)ಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಕನ್ನಡ ವಿಷಯ ಬೋಧನೆ ಮಾಡುತ್ತಿದ್ದರು.

ವರ್ಷದ ಹಿಂದೆ ಮನೆಯಲ್ಲೇ ಬಿದ್ದು ಬೆನ್ನುಹುರಿಗೆ ಹಾನಿಯಾಗಿ ಅವರು ಹಾಸಿಗೆ ಹಿಡಿದಿದ್ದರು. ಭಾನುವಾರ ಆಸ್ಪತ್ರೆಗೆ ದಾಖಲಾಗಿ‌ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಬೆಳಿಗ್ಗೆ ತೀವ್ರ ಹೃದಯಾಘಾತವಾಗಿ‌ ನಿಧ‌ನರಾದರು.

ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಕಾವೇರಿನಗರದ ಅವರ ನಿವಾಸದಲ್ಲಿ ಸಾರ್ವಜನಿಕ ‌ದರ್ಶನ ವ್ಯವಸ್ಥೆ ಮಾಡಲಾಗಿದೆ.‌ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ‌ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.