ADVERTISEMENT

ದರ್ಶನ್‌ಗೆ ಹಾಕಿದ್ದು ಪ್ಲಾಸ್ಟಿಕ್‌ ನವಿಲುಗರಿ ಹಾರ: ಬಡಗಲಪುರ ನಾಗೇಂದ್ರ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2023, 22:49 IST
Last Updated 14 ಮಾರ್ಚ್ 2023, 22:49 IST
ಬಡಗಲಪುರ ನಾಗೇಂದ್ರ
ಬಡಗಲಪುರ ನಾಗೇಂದ್ರ   

ಪಾಂಡವಪುರ (ಮಂಡ್ಯ ಜಿಲ್ಲೆ): ‘ಮೇಲುಕೋಟೆ ಕ್ಷೇತ್ರದ ಕರ್ನಾಟಕ ಸರ್ವೋದಯ ಪಕ್ಷದ ಘೋಷಿತ ಅಭ್ಯರ್ಥಿ ದರ್ಶನ್‌ ಪುಟ್ಟಣ್ಣಯ್ಯ ಅವರಿಗೆ ವಿಶ್ವೇಶ್ವರಯ್ಯ ನಗರದ ಅಭಿಮಾನಿಗಳು ಹಾಕಿದ್ದ ಹಾರ ನಿಜವಾದ ನವಿಲುಗರಿಯದ್ದಲ್ಲ; ಪ್ಲಾಸ್ಟಿಕ್‌ನಿಂದ ತಯಾರಿಸಿದ್ದು’ ಎಂದು ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

‘ನವಿಲು ಗರಿಯಿಂದ ತಯಾರಿಸಿದ ಹಾರವನ್ನು ದರ್ಶನ್ ಪುಟ್ಟಣ್ಣಯ್ಯ ಹಾಕಿಸಿಕೊಂಡಿದ್ದಾರೆಂದು ಆರೋಪಿಸಿ ವಲಯ ಅರಣ್ಯಾಧಿಕಾರಿ ಪುಟ್ಟಸ್ವಾಮಿ ನೋಟಿಸ್‌ ನೀಡಿರುವುದರ ಹಿಂದೆ ಎದುರಾಳಿ ರಾಜಕೀಯ ವ್ಯಕ್ತಿಗಳ ಕುಮ್ಮಕ್ಕು ಇದೆ. ಇಂತಹ ಹಾರಗಳನ್ನು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಜೆಡಿಎಸ್‌ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರಿಗೂ ಹಾಕಲಾಗಿದೆ. ಅವರಿಗೆ ಯಾವುದೇ ನೋಟಿಸ್ ನೀಡದ ಇಲಾಖೆ ಅಧಿಕಾರಿಗಳು ದರ್ಶನ್ ಅವರಿಗೆ ಮಾತ್ರ ನೀಡಿರುವುದರ ಹಿಂದೆ ರಾಜಕೀಯ ಹುನ್ನಾರವಿದೆ’ ಎಂದಿದ್ದಾರೆ.

‘ಪ್ಲಾಸ್ಟಿಕ್‌ನಿಂದ ತಯಾರಿಸಿದ ನವಿಲುಗರಿ ಹಾರವನ್ನು ಅಂಗಡಿಗಳಲ್ಲಿ ರಾಜಾರೋಷವಾಗಿ ಮಾರಾಟ ಮಾಡಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.